ಬೆಂಗಳೂರು: ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ನೌಕರರ ಮುಷ್ಕರ ಮೂರನೇ ದಿನವೂ ಮುಂದುವರಿದಿದೆ. ಮುಷ್ಕರದಿಂದಾಗಿ ಸಾರಿಗೆ ಸಂಸ್ಥೆ ಬಸ್ಗಳು ರಸ್ತೆಗಿಳಿಯದೆ ಬೆಂಗಳೂರಿನ ಕೆಂಪೇಗೌಡ ಬಸ್ ನಿಲ್ದಾಣ ಬುಧವಾರವೂ ಬಣಗುಡುತ್ತಿತ್ತು.
ಕೆಲ ಖಾಸಗಿ ಬಸ್ಗಳು ಮೆಜೆಸ್ಟಿಕ್ನಿಂದ ಮೈಸೂರು, ತುಮಕೂರು, ಚಿತ್ರದುರ್ಗ ಮಾರ್ಗದಲ್ಲಿ ಸಂಚಾರ ನಡೆಸುತ್ತಿವೆ.
ಬಿಎಂಟಿಸಿ ಬಸ್ ಸೇವೆ ಇಲ್ಲದೆ ನಗರದೊಳಗಿನ ಬೇರೆ ಬೇರೆ ಭಾಗಗಳಿಗೆ ಸಂಚರಿಸಲು ಪ್ರಯಾಣಿಕರು ಪರದಾಡುತ್ತಿದ್ದರೆ, ಪರವೂರುಗಳಿಗೆ ತೆರಳುವ ಬೆರಳೆಣಿಕೆಯ ಖಾಸಗಿ ಬಸ್ಗಳು ತುಂಬಿ ತುಳುಕುತ್ತಿದ್ದವು.
</p></p>
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.