ADVERTISEMENT

ಮೂವರಿಗೆ ರತ್ನಮ್ಮ ಹೆಗ್ಗಡೆ ಗ್ರಂಥ ಬಹುಮಾನ

​ಪ್ರಜಾವಾಣಿ ವಾರ್ತೆ
Published 5 ಫೆಬ್ರುವರಿ 2014, 19:30 IST
Last Updated 5 ಫೆಬ್ರುವರಿ 2014, 19:30 IST
ಮೂವರಿಗೆ ರತ್ನಮ್ಮ ಹೆಗ್ಗಡೆ ಗ್ರಂಥ ಬಹುಮಾನ
ಮೂವರಿಗೆ ರತ್ನಮ್ಮ ಹೆಗ್ಗಡೆ ಗ್ರಂಥ ಬಹುಮಾನ   

ಧಾರವಾಡ: ಇಲ್ಲಿಯ ಕರ್ನಾಟಕ ವಿದ್ಯಾವರ್ಧಕ ಸಂಘವು ನೀಡುವ 2012ನೇ ಸಾಲಿನ ‘ಮಾತೋಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹು­ಮಾನ’ಕ್ಕೆ ಮೂವರು ಲೇಖಕಿ­ಯರನ್ನು ಆಯ್ಕೆ ಮಾಡಿದ್ದು, ಪ್ರಶಸ್ತಿಯು ತಲಾ ₨ 10 ಸಾವಿರ ನಗದು, ಪ್ರಶಸ್ತಿ ಪತ್ರವನ್ನು ಒಳಗೊಂಡಿದೆ.

ಗುಲ್ಬರ್ಗದ ಡಾ.ವಸುಂಧರಾ ಭೂಪತಿ ಅವರ ಆರೋಗ್ಯ ಲೇಖನಗಳ ಸಂಗ್ರಹ ‘ಮೊಗ್ಗು ಅರಳುವಾಗ’ ಕೃತಿ, ಉಡುಪಿಯ ಪ್ರಜ್ಞಾ ಮಾರ್ಪಳ್ಳಿ ಅವರ ‘ಅಲೆಗಳು’ ಕಾದಂಬರಿ, ಬೆಂಗಳೂರಿನ ಪಿ.ಚಂದ್ರಿಕಾ ಅವರ ‘ತಾಮ್ರವರ್ಣದ ತಾಯಿ’ ಕವನ ಸಂಕಲನ ಕೃತಿಗಳು ಗ್ರಂಥ ಬಹುಮಾನಕ್ಕೆ ಆಯ್ಕೆಯಾಗಿವೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಶಂಕರ ಹಲಗತ್ತಿ ತಿಳಿಸಿದ್ದಾರೆ. ಮಾರ್ಚ್‌ನಲ್ಲಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.