ಮೈಸೂರು: ಚಾಮರಾಜೇಂದ್ರ ಮೃಗಾಲಯಕ್ಕೆ ಹೊರಗಿನಿಂದ ಚಿರತೆಯೊಂದು ನುಗ್ಗಿದೆ.
ಚಿರತೆಯನ್ನು ಸೆರೆ ಹಿಡಿಯುವ ಕಾರ್ಯಾಚರಣೆ ನಡೆಯುತ್ತಿದೆ. ಹೀಗಾಗಿ ಮೃಗಾಲಯದಿಂದ ಪ್ರವಾಸಿಗರನ್ನು ಹೊರಕ್ಕೆ ಕಳುಹಿಸಲಾಗುತ್ತಿದೆ. ಪ್ರವಾಸಿಗರು ಮೃಗಾಲಯ ಪ್ರವೇಶಿಸಲು ತಾತ್ಕಾಲಿಕವಾಗಿ ನಿರ್ಬಂಧ ವಿಧಿಸಲಾಗಿದೆ.
ಎತ್ತರದ ಮರದ ಮೇಲೆ ಚಿರತೆ ಇರುವುದರಿಂದ ಅರಿವಳಿಕೆ ಚುಚ್ಚುಮದ್ದು ನೀಡುವುದು ಕಷ್ಟವಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.