ಮೈಸೂರು: ಆಂದೋಲನ ದಿನಪತ್ರಿಕೆ ಸಂಪಾದಕ ರಾಜಶೇಖರ ಕೋಟಿ (71) ಹೃದಯಾಘಾತದಿಂದ ಬೆಂಗಳೂರಿನಲ್ಲಿ ಗುರುವಾರ ನಿಧನರಾದರು.
ಪತ್ನಿ, ಪುತ್ರ ಹಾಗೂ ಇಬ್ಬರು ಪುತ್ರಿಯರು ಇದ್ದಾರೆ. ಕಾರ್ಯನಿಮಿತ್ತ ಬೆಂಗಳೂರಿಗೆ ತೆರಳಿದ್ದ ಕೋಟಿ ಅವರಿಗೆ ಬುಧವಾರ ಮಧ್ಯರಾತ್ರಿ ಎದೆನೋವು ಕಾಣಿಸಿಕೊಂಡಿತ್ತು. ಮಲ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ವಸತಿಗೃಹಕ್ಕೆ ಮರಳಿದ ಬಳಿಕ ಹೃದಯಾಘಾತಕ್ಕೆ ತುತ್ತಾಗಿದ್ದಾರೆ. ಚಾಮುಂಡಿಬೆಟ್ಟದ ತಪ್ಪಲಿನ ಚಿತಾಗಾರದಲ್ಲಿ ಅಂತ್ಯಕ್ರಿಯೆ ನೆರವೇರಿತು.
ಗದಗ ಜಿಲ್ಲೆಯ ಹುಯಿಲುಗೊಳದ ಕೋಟಿ ಅವರು ಪಾಟೀಲ ಪುಟ್ಟಪ್ಪ ಅವರ ‘ಪ್ರಪಂಚ’ ಪತ್ರಿಕೆಯಿಂದ ವೃತ್ತಿ ಜೀವನ ಆರಂಭಿಸಿದರು.
ಗದಗದಲ್ಲಿ ವಾರಪತ್ರಿಕೆಯಾಗಿದ್ದ ‘ಆಂದೋಲನ’ವನ್ನು ಮೈಸೂರಿಗೆ ತಂದು ದಿನಪತ್ರಿಕೆಯನ್ನಾಗಿ ರೂಪಿಸಿದರು. ಅಚ್ಚುಮೊಳೆ ಜೋಡಿಸುವುದರಿಂದ ಸಂಪಾದಕರ ಹುದ್ದೆಯವರೆಗೆ ಎಲ್ಲ ಕೆಲಸಗಳನ್ನು ಮಾಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.