ADVERTISEMENT

ರಂಗ ಪ್ರಯೋಗ ಶಾಲೆಗೆ ಅರ್ಜಿ ಆಹ್ವಾನ

​ಪ್ರಜಾವಾಣಿ ವಾರ್ತೆ
Published 27 ಮೇ 2016, 19:50 IST
Last Updated 27 ಮೇ 2016, 19:50 IST

ಹೊಸದುರ್ಗ: ತಾಲ್ಲೂಕಿನ ಸಾಣೇಹಳ್ಳಿ ತರಳಬಾಳು ಶಾಖಾ ಮಠದ ಪಂಡಿತಾರಾಧ್ಯ ಸ್ವಾಮೀಜಿ ಮಾರ್ಗದರ್ಶನದಲ್ಲಿ ನಡೆಯುತ್ತಿರುವ ಶಿವಕುಮಾರ ರಂಗ ಪ್ರಯೋಗ ಶಾಲೆ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ಎರಡು ವರ್ಷದ ನಾಟಕ ಡಿಪ್ಲೊಮಾ ಕೋರ್ಸ್ ಇದಾಗಿದ್ದು, ಮೊದಲನೆಯ ವರ್ಷ ಸಾಣೇಹಳ್ಳಿಯಲ್ಲಿಯೇ ಇದ್ದು ತರಬೇತಿ ನೀಡಲಾಗುವುದು. ಎರಡನೇ ವರ್ಷ ಶಿವಸಂಚಾರ ತಿರುಗಾಟದಲ್ಲಿ ನಟರಾಗಿ, ತಂತ್ರಜ್ಞರಾಗಿ ಕೆಲಸ ಮಾಡಬೇಕಾಗುತ್ತದೆ. ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪ್ರೌಢಶಿಕ್ಷಣ ಮಂಡಳಿಯಿಂದ ಪ್ರಮಾಣಪತ್ರ ನೀಡಲಾಗುವುದು.

ಪ್ರವೇಶ ಬಯಸುವವರು ಕನಿಷ್ಠ ಎಸ್ಸೆಸ್ಸೆಲ್ಸಿ ಉತ್ತೀರ್ಣರಾಗಿರಬೇಕು. ಹೆಚ್ಚು ವಿದ್ಯಾರ್ಹತೆ ಮತ್ತು ರಂಗಭೂಮಿಯಲ್ಲಿ ಆಸಕ್ತಿ ಹೊಂದಿದವರಿಗೆ ಆದ್ಯತೆ ನೀಡಲಾಗುವುದು. ಜೂನ್ 28 ಮತ್ತು 29ರಂದು ಸಾಣೇಹಳ್ಳಿಯಲ್ಲಿ ಸಂದರ್ಶನ ಏರ್ಪಡಿಸಲಾಗಿದೆ. ಆಯ್ಕೆಯಾದ ವಿದ್ಯಾರ್ಥಿಗಳಿಗೆ ಉಚಿತ ಊಟ, ವಸತಿ ವ್ಯವಸ್ಥೆ ಮಾಡಲಾಗುವುದು.  ಮಾಹಿತಿಗೆ ಮೊ. 94483 98144 ಸಂಪರ್ಕಿಸಬಹುದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.