ADVERTISEMENT

ರಮ್ಯಾಗೆ ಬೆಂಬಲ ಅಗತ್ಯವಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

​ಪ್ರಜಾವಾಣಿ ವಾರ್ತೆ
Published 28 ಆಗಸ್ಟ್ 2016, 19:30 IST
Last Updated 28 ಆಗಸ್ಟ್ 2016, 19:30 IST
ರಮ್ಯಾಗೆ ಬೆಂಬಲ  ಅಗತ್ಯವಿಲ್ಲ: ಮುಖ್ಯಮಂತ್ರಿ  ಸಿದ್ದರಾಮಯ್ಯ
ರಮ್ಯಾಗೆ ಬೆಂಬಲ ಅಗತ್ಯವಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ   

ಹುಬ್ಬಳ್ಳಿ: ಪಾಕಿಸ್ತಾನ ಪರ ಹೇಳಿಕೆ ನೀಡಿದ ಮಾಜಿ ಸಂಸದೆ ರಮ್ಯಾ ಅವರಿಗೆ ಯಾರ ಬೆಂಬಲದ ಅಗತ್ಯವೂ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಇಲ್ಲಿ ಹೇಳಿದರು.

ಧಾರವಾಡ ಐಐಟಿ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳಲು ಬಂದಿದ್ದ ಅವರು, ನಗರದ ವಿಮಾನ ನಿಲ್ದಾಣದಲ್ಲಿ ಪತ್ರಕರ್ತರ ಜೊತೆ ಮಾತನಾಡಿದರು. ‘ರಮ್ಯಾ ವಿರುದ್ಧ ಬಿಜೆಪಿಯವರು ಹೋರಾಟ ಮಾಡುತ್ತಿದ್ದರೂ ಕಾಂಗ್ರೆಸ್‌ನವರಾರೂ ರಮ್ಯಾ ಬೆಂಬಲಕ್ಕೆ ನಿಲ್ಲಲಿಲ್ಲವಲ್ಲ’ ಎಂದು ಪತ್ರಕರ್ತರು ಕೇಳಿದಾಗ, ‘ಅವರಿಗೆ ಸ್ವಂತವಾಗಿ ಹೋರಾಡುವ ತಾಕತ್ತಿದೆ.

ಆದ್ದರಿಂದ ಅವರಿಗೆ ಯಾರ ಬೆಂಬಲ ಬೇಡ. ಹಾಗೇನಾದರೂ ಬೇಕಿದ್ದರೆ ಕಾಂಗ್ರೆಸ್‌ ಅವರ ಜೊತೆಗಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.