ಬಾಗೇಪಲ್ಲಿ: ನಟ ಹಾಗೂ ಹಿಂದೂಪುರ ಶಾಸಕ ನಂದಮೂರಿ ಬಾಲಕೃಷ್ಣ ಅವರ ಪ್ರಯಾಣಿಸುತ್ತಿದ್ದ ಕಾರು ಬುಧವಾರ ಬಾಗೇಪಲ್ಲಿ ಪಟ್ಟಣದ ರಾಷ್ಟ್ರೀಯ ಹೆದ್ದಾರಿ 7ರಲ್ಲಿ ರಸ್ತೆ ವಿಭಜಕದ ಮೇಲೆ ಹತ್ತಿದೆ.
ಬಾಲಕೃಷ್ಣ ಬೆಂಗಳೂರಿಗೆ ಪ್ರಯಾಣ ಬೆಳೆಸುತ್ತಿದ್ದರು. ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಈ ಅವಘಡ ನಡೆದಿದೆ. ಎದುರಿನಿಂದ ಯಾವುದೇ ವಾಹನಗಳು ಬರದಿರುವುದರಿಂದ ಪ್ರಾಣಾಪಾಯ ಸಂಭವಿಸಿಲ್ಲ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಆಂಧ್ರ ಪ್ರದೇಶ ಮತ್ತು ಕರ್ನಾಟಕ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಯಂತ್ರ ಸಹಾಯದಿಂದ ಕಾರನ್ನು ತೆರವುಗೊಳಿಸಿದರು. ಮತ್ತೊಂದು ವಾಹನದಲ್ಲಿ ಬಾಲಕೃಷ್ಣ ಬೆಂಗಳೂರಿಗೆ ಪ್ರಯಾಣಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.