ಬೆಂಗಳೂರು: ರಾಜ್ಯ ಚುನಾವಣಾ ಆಯೋಗದ ಆಯುಕ್ತರಾಗಿ ನಿವೃತ್ತ ಐಎಎಸ್ ಅಧಿಕಾರಿ ಪಿ.ಎನ್. ಶ್ರೀನಿವಾಸಾಚಾರಿ ಬುಧವಾರ ಅಧಿಕಾರ ವಹಿಸಿಕೊಂಡರು. ಆಯುಕ್ತರಾದ ಎರಡನೇ ದಿನ ಅವರು ಜೋಗ– ಕಾರ್ಗಲ್ ಪಟ್ಟಣ ಪಂಚಾಯಿತಿಗೆ ಚುನಾವಣಾ ವೇಳಾಪಟ್ಟಿ ಘೋಷಿಸಿದ್ದಾರೆ. ಡಿ.5ರಂದು ಚುನಾವಣೆ ನಡೆಯಲಿದೆ.
25 ಜಿಲ್ಲೆಗಳ ವಿವಿಧ ಗ್ರಾಮ ಪಂಚಾಯಿತಿಗಳಿಗೂ ಅಂದೇ ಉಪ ಚುನಾವಣೆ ನಡೆಯಲಿದೆ. ಚುನಾವಣೆಗೆ ಆಯಾ ಜಿಲ್ಲಾಧಿಕಾರಿಗಳು ಅಧಿಸೂಚನೆ ಹೊರಡಿಸಲಿದ್ದಾರೆ ಎಂದು ಹೇಳಿದರು.
ಭೇಟಿ: ರಾಜ್ಯಪಾಲ ವಜು ಭಾಯಿ ವಾಲಾ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಆಯುಕ್ತರು ಭೇಟಿ ಮಾಡಿ, ಚರ್ಚೆ ನಡೆಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.