ADVERTISEMENT

ರಾಮನಗರ ತಾಲ್ಲೂಕಿನ ಚಿಕ್ಕೇನಹಳ್ಳಿ ಕೆರೆಯಲ್ಲಿ ಮುಳುಗಿ ಮೂವರು ಸಾವು

​ಪ್ರಜಾವಾಣಿ ವಾರ್ತೆ
Published 8 ಏಪ್ರಿಲ್ 2018, 12:01 IST
Last Updated 8 ಏಪ್ರಿಲ್ 2018, 12:01 IST
ರಾಮನಗರ ತಾಲ್ಲೂಕಿನ ಚಿಕ್ಕೇನಹಳ್ಳಿ ಕೆರೆಯಲ್ಲಿ ಮುಳುಗಿ ಮೂವರು ಸಾವು
ರಾಮನಗರ ತಾಲ್ಲೂಕಿನ ಚಿಕ್ಕೇನಹಳ್ಳಿ ಕೆರೆಯಲ್ಲಿ ಮುಳುಗಿ ಮೂವರು ಸಾವು   

ರಾಮನಗರ: ತಾಲ್ಲೂಕಿನ ಚಿಕ್ಕೇನಹಳ್ಳಿ ಕೆರೆಯಲ್ಲಿ ಮುಳುಗಿ ಭಾನುವಾರ‌ ಮೂವರು ಮೃತಪಟ್ಟಿದ್ದಾರೆ.

ಚನ್ನಪಟ್ಟಣದ ಹನುಮಂತ ನಗರದ ನಿವಾಸಿ ಶೇಖರ್ (39) ಅವರ ಪತ್ನಿ ಸುಮಾ ಹಾಗೂ ಧನು (8) ಮೃತರು.‌ ಸಂಬಂಧಿಕರಾದ ರಾಜು ಎಂಬುವರ ಮನೆಗೆ ಬಂದಿದ್ದ ಅವರು ಕೆರೆಗೆ ತೆರಳಿದ್ದರು.‌ ಈ ಸಂದರ್ಭ ಮಕ್ಕಳು ಆಟವಾಡುತ್ತಾ ನೀರಿನಲ್ಲಿ ಮುಳುಗಿದ್ದು, ಅವರ ರಕ್ಷಣೆಗೆ ಧಾವಿಸಿದ ದಂಪತಿ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.

ಬಾಲಕಿ ಹಂಸ ತೀವ್ರವಾಗಿ ಅಸ್ವಸ್ಥರಾಗಿದ್ದು, ಚಿಕಿತ್ಸೆಗೆ ದಾಖಲಿಸಲಾಗಿದೆ.‌ ರಾಮನಗರ ಗ್ರಾಮೀಣ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.