ADVERTISEMENT

ರಾಷ್ಟ್ರೀಯ ಮಕ್ಕಳ ಪುರಸ್ಕಾರ ಪಡೆದ ರೇವತಿ ಎಂ. ನಾಯಕಗೆ ಮುಖ್ಯಮಂತ್ರಿ ಅಭಿನಂದನೆ

​ಪ್ರಜಾವಾಣಿ ವಾರ್ತೆ
Published 15 ನವೆಂಬರ್ 2016, 5:49 IST
Last Updated 15 ನವೆಂಬರ್ 2016, 5:49 IST
ರಾಷ್ಟ್ರೀಯ ಮಕ್ಕಳ ಪುರಸ್ಕಾರ ಪಡೆದ ರೇವತಿ ಎಂ. ನಾಯಕಗೆ ಮುಖ್ಯಮಂತ್ರಿ ಅಭಿನಂದನೆ
ರಾಷ್ಟ್ರೀಯ ಮಕ್ಕಳ ಪುರಸ್ಕಾರ ಪಡೆದ ರೇವತಿ ಎಂ. ನಾಯಕಗೆ ಮುಖ್ಯಮಂತ್ರಿ ಅಭಿನಂದನೆ   

ಬೆಂಗಳೂರು: ಪ್ಯಾರಾಲಿಂಪಿಯನ್‌ನಲ್ಲಿ ತೋರಿದ ಅಸಾಧಾರಣ ಸಾಧನೆಗಾಗಿ ಸೋಮವಾರ ದೆಹಲಿಯಲ್ಲಿ ರಾಷ್ಟ್ರಪತಿ ಪ್ರಣವ್‌ ಮುಖರ್ಜಿ ಅವರಿಂದ ರಾಷ್ಟ್ರೀಯ ಮಕ್ಕಳ ಪುರಸ್ಕಾರ ಹಾಗೂ ಚಿನ್ನದ ಪದಕ ಪಡೆದಿರುವ ದಾವಣಗೆರೆಯ ಪ್ಯಾರಾಲಿಂಪಿಯನ್‌ ಈಜುಪಟು ರೇವತಿ ಎಂ. ನಾಯಕ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿನಂದನೆ ತಿಳಿಸಿದ್ದಾರೆ.

‘ಅಸಾಧಾರಣ ಸಾಧನೆ ತೋರಿ ರಾಷ್ಟ್ರಪತಿ ಅವರಿಂದ ಚಿನ್ನದ ಪದಕ ಪಡೆದ ದಾವಣಗೆರೆ ಜಿಲ್ಲೆಯ ಪ್ಯಾರಾಲಿಂಪಿಯನ್‌ ರೇವತಿ ಎಂ. ನಾಯಕಗೆ ಅಭಿನಂದನೆಗಳು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಟ್ವೀಟ್‌ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT