ಹುಬ್ಬಳ್ಳಿ: ಹಜ್ ಯಾತ್ರೆಗೆ ಕರೆದೊಯ್ಯುವುದಾಗಿ ಹೇಳಿ ₹1.74 ಕೋಟಿ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇಲ್ಲಿನ ಹಬೀಬ್ ಹರ್ಮೈನ್ ಟ್ರಾವೆಲ್ ಏಜೆನ್ಸಿ ಮಾಲೀಕ ಹಸ್ಮತ್ ಖಾದ್ರಿ ವಿರುದ್ಧ ಸೋಮವಾರ ಮತ್ತಷ್ಟು ದೂರುಗಳು ಬಂದಿವೆ.
ವಿಜಯಪುರದ ಗೋಳಗುಮ್ಮಟ ಪೊಲೀಸ್ ಠಾಣೆಯಲ್ಲಿ 20ಕ್ಕೂ ಹೆಚ್ಚು ಮಂದಿ ದೂರು ದಾಖಲಿಸಿ, ತಮಗೆ ₹40 ಲಕ್ಷ ವಂಚಿಸಲಾಗಿದೆ ಎಂದು ಹೇಳಿದ್ದಾರೆ.
ಈ ನಡುವೆ ಆರೋಪಿ ಪತ್ತೆಗಾಗಿ ಹುಬ್ಬಳ್ಳಿ ಪೊಲೀಸರು ಹುಡುಕಾಟ ನಡೆಸಿದ್ದಾರೆ. ಒಂದು ತಂಡ ಬೆಂಗಳೂರಿಗೂ ತೆರಳಿದ್ದು, ಸುಳಿವು ಸಿಕ್ಕಿಲ್ಲ ಎನ್ನಲಾಗಿದೆ. ಖಾದ್ರಿ ಅವರ ಆಪ್ತರ ಪ್ರಕಾರ ಆತ ವಿದೇಶಕ್ಕೆ ಹೋಗಿರುವ ಶಂಕೆ ಇದೆ ಎಂದು ಪೊಲೀಸರು ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.