ADVERTISEMENT

ವಿಜಯ ಸಂಕೇಶ್ವರ ಹೇಳಿಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು

​ಪ್ರಜಾವಾಣಿ ವಾರ್ತೆ
Published 13 ಮಾರ್ಚ್ 2018, 8:26 IST
Last Updated 13 ಮಾರ್ಚ್ 2018, 8:26 IST
ಸಿದ್ದರಾಮಯ್ಯ (ಸಂಗ್ರಹ ಚಿತ್ರ)
ಸಿದ್ದರಾಮಯ್ಯ (ಸಂಗ್ರಹ ಚಿತ್ರ)   

ಹಾವೇರಿ: ಪ್ರತ್ಯೇಕ ಲಿಂಗಾಯತ ಧರ್ಮ ವಿಚಾರದಲ್ಲಿ ಮುಖ್ಯಮಂತ್ರಿ ನಾಟಕ ಮಾಡುತ್ತಿದ್ದಾರೆ ಎಂಬುದು ಉದ್ಯಮಿ ವಿಜಯ ಸಂಕೇಶ್ವರ ಅವರ ಬೇಜವಾಬ್ದಾರಿ ಹಾಗೂ ಆಧಾರರಹಿತ ಹೇಳಿಕೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಪ್ರತ್ಯೇಕ ಲಿಂಗಾಯತ ಧರ್ಮ ಕುರಿತು ನಾಳಿನ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲಾಗುವುದು ಎಂದೂ ಅವರು ಹೇಳಿದರು.

ಹಾವೇರಿ ಜಿಲ್ಲೆಯ ರಾಣಿಬೆನ್ನೂರು ತಾಲ್ಲೂಕಿನ ಅಸುಂಡಿ ಮತ್ತು 17 ಕೆರೆಗಳನ್ನು ತುಂಬಿಸುವ ಯೋಜನೆಗೆ ಚಾಲನೆ ನೀಡಿ ಅವರು ಮಾತನಾಡಿದರು. ವಿಧಾನ ಸಭಾಧ್ಯಕ್ಷ ಕೆ. ಬಿ. ಕೋಳಿವಾಡ, ಸಚಿವ ರುದ್ರಪ್ಪ ಲಮಾಣಿ, ಶಾಸಕ ಬಸವರಾಜ ಶಿವಣ್ಣವರ ಇದ್ದರು.

ADVERTISEMENT

‘ಮೆಕ್ಕೆಜೋಳ ಖರೀದಿ ಕೇಂದ್ರ ತೆರೆಯಲು ಹಾಕಿರುವ ಷರತ್ತುಗಳ ಕುರಿತು ನಿಮ್ಮ ಸಂಸದರು ಹಾಗೂ ಪ್ರಧಾನಿಗಳ ಬಳಿ ಪ್ರಶ್ನಿಸಿ’ ಎಂದು ಸುದ್ದಿಗಾರರ ಪ್ರಶ್ನೆಗೆ ಸಿದ್ದರಾಮಯ್ಯ ಪ್ರತಿಕ್ರಿಯಿಸಿದರು.

ಇವನ್ನೂ ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.