ADVERTISEMENT

ಶೌಚಾಲಯ ನಿರ್ಮಿಸಿಕೊಳ್ಳದಿದ್ದಲ್ಲಿ ಕೃಷ್ಣ ಜಯಂತಿಗೆ ಬರುವುದಿಲ್ಲ!

​ಪ್ರಜಾವಾಣಿ ವಾರ್ತೆ
Published 29 ಆಗಸ್ಟ್ 2016, 19:30 IST
Last Updated 29 ಆಗಸ್ಟ್ 2016, 19:30 IST

ಮೊಳಕಾಲ್ಮುರು (ಚಿತ್ರದುರ್ಗ ಜಿಲ್ಲೆ): ಗೊಲ್ಲರಹಟ್ಟಿಗಳಲ್ಲಿ ವೈಯಕ್ತಿಕ ಶೌಚಾಲಯಗಳನ್ನು ನಿರ್ಮಿಸಿಕೊಳ್ಳದಿದ್ದಲ್ಲಿ ಮುಂದಿನ ವರ್ಷದಿಂದ ನಾನು ಶ್ರೀಕೃಷ್ಣ ಜಯಂತಿ ಕಾರ್ಯಕ್ರಮಗಳಿಗೆ ಬರುವುದಿಲ್ಲ ಎಂದು ವಿಧಾನ ಪರಿಷತ್ ಸದಸ್ಯೆ ಜಯಮ್ಮ ಬಾಲರಾಜ್‌ ಹೇಳಿದರು.

ತಾಲ್ಲೂಕಿನ ಕೊಂಡ್ಲಹಳ್ಳಿಯಲ್ಲಿ ಸೋಮವಾರ ಏರ್ಪಡಿಸಿದ್ದ ಶ್ರೀಕೃಷ್ಣ ಜಯಂತಿ ಕಾರ್ಯಕ್ರಮದಲ್ಲಿ  ಮಾತನಾಡಿದ ಅವರು, ‘ಗೊಲ್ಲ ಜನಾಂಗದವರು ಮೂಢನಂಬಿಕೆ ಮುಂದಿಟ್ಟುಕೊಂಡು ಶೌಚಾಲಯ ನಿರ್ಮಿಸಿಕೊಳ್ಳುತ್ತಿಲ್ಲ ಎನ್ನುವುದು ಪ್ರವಾಸದ ವೇಳೆ ನನ್ನ ಗಮನಕ್ಕೆ ಬಂದಿದೆ. ಜನಾಂಗದ ಮಹಿಳೆಯರ ಹಿತದೃಷ್ಟಿಯಿಂದ ಶೌಚಾಲಯ ನಿರ್ಮಿಸಿಕೊಳ್ಳಬೇಕು’ ಎಂದರು.

ಗೊಲ್ಲ ಜನಾಂಗವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲು ಮುಖ್ಯಮಂತ್ರಿ ಅವರಲ್ಲಿ ಮನವಿ ಮಾಡಿಕೊಂಡಿದ್ದು ಜಾತಿಗಣತಿ ವರದಿ ನಂತರ ಸೇರ್ಪಡೆ ಮಾಡುವ ಭರವಸೆ ಇದೆ ಎಂದು ಜಯಮ್ಮ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.