ADVERTISEMENT

‘ಸಚಿವರ ಜೊತೆ ಚರ್ಚಿಸಿ ತೀರ್ಮಾನ’

​ಪ್ರಜಾವಾಣಿ ವಾರ್ತೆ
Published 23 ನವೆಂಬರ್ 2017, 19:30 IST
Last Updated 23 ನವೆಂಬರ್ 2017, 19:30 IST
ಎಚ್‌.ಕೆ. ಪಾಟೀಲ
ಎಚ್‌.ಕೆ. ಪಾಟೀಲ   

ಬೆಳಗಾವಿ: ‘ರೈತರು ಜಮೀನುಗಳಿಗೆ ಹೋಗಲು, ಬೆಳೆಗಳ ಸಾಗಣೆಗೆ ರಸ್ತೆಗಳ ನಿರ್ಮಾಣಕ್ಕೆ ಅಗತ್ಯ ಭೂಮಿ ವಶಪಡಿಸಿಕೊಳ್ಳುವ ಸಂಬಂಧ ಕಂದಾಯ ಮತ್ತು ಕೃಷಿ ಸಚಿವರ ಜೊತೆ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳಲಾಗುವುದು’ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಎಚ್‌.ಕೆ. ಪಾಟೀಲ ತಿಳಿಸಿದರು.

ವಿಧಾನಸಭೆಯಲ್ಲಿ ಕೆ.ಎಸ್‌. ಪುಟ್ಟಣ್ಣಯ್ಯ ವಿಷಯ ಪ್ರಸ್ತಾಪಿಸಿದಾಗ ಮಾತನಾಡಿದ ಸಚಿವರು, ‘ಕಾಲುದಾರಿ, ಚಕ್ಕಡಿ ದಾರಿ, ಹೊಲದ ದಾರಿ ಎಂದು ಕಂದಾಯ ದಾಖಲೆಗಳಲ್ಲಿ ಈ ಹಿಂದೆ ಸ್ಪಷ್ಟವಾಗಿ ನಮೂದಾಗಿದೆ. ಆದರೆ, ಇತ್ತೀಚಿನ ದಿನಗಳಲ್ಲಿ ಒತ್ತುವರಿ ಪರಿಣಾಮ ಸಮಸ್ಯೆ ಉದ್ಭವಿಸಿದೆ’ ಎಂದರು.

‘ನಮ್ಮ ಹೊಲ ನಮ್ಮ ದಾರಿ’ ಯೋಜನೆಯಲ್ಲಿ ಬಹಳಷ್ಟು ಸಮಸ್ಯೆಗಳು ಪರಿಹಾರ ಆಗಿವೆ. ಕಂದಾಯ ದಾಖಲೆಗಳಲ್ಲಿ ಇಲ್ಲದ ಕಡೆ ದಾರಿ ಗುರುತಿಸುವ ಸಂಬಂಧ ಸಚಿವರ ಜೊತೆ ಚರ್ಚಿಸಿ ತೀರ್ಮಾನಿಸಲಾಗುವುದು’ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.