ADVERTISEMENT

ಸಚಿವ ಎಚ್.ಸಿ.ಮಹದೇವಪ್ಪ ಮನೆ ಮೇಲೆ ಐಟಿ ದಾಳಿ ವದಂತಿ

​ಪ್ರಜಾವಾಣಿ ವಾರ್ತೆ
Published 24 ಏಪ್ರಿಲ್ 2018, 6:07 IST
Last Updated 24 ಏಪ್ರಿಲ್ 2018, 6:07 IST
ಸಚಿವ ಮಹದೇವಪ್ಪ ನಿವಾಸ
ಸಚಿವ ಮಹದೇವಪ್ಪ ನಿವಾಸ   

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತ, ಸಚಿವ ಎಚ್.ಸಿ.ಮಹದೇವಪ್ಪ ಅವರ ಮನೆ ಮೇಲೆ ಆದಾಯ ತೆರಿಗೆ (ಐಟಿ) ಇಲಾಖೆ ಅಧಿಕಾರಿಗಳು ಮಂಗಳವಾರ ಬೆಳಿಗ್ಗೆ ದಾಳಿ ನಡೆಸಿದ್ದಾರೆ ಎಂಬ ವದಂತಿ ಹಬ್ಬಿದೆ.

ಇಲ್ಲಿನ ವಿಜಯನಗರದಲ್ಲಿರುವ ಸಚಿವರ ಮನೆಗೆ ದಾಳಿ ನಡೆಸಿರುವ ಅಧಿಕಾರಿಗಳ ತಂಡ ದಾಖಲೆಗಳ ಪರಿಶೀಲನೆ ನಡೆಸುತ್ತಿದೆ. ದಾಳಿ ವೇಳೆ ಸಚಿವರು ಮನೆಯಲ್ಲೇ ಇದ್ದರು ಎಂಬ ವದಂತಿ ಹರಡಿದೆ.

ಸುಮಾರು 11 ಗಂಟೆಗೆ ಮನೆಯಿಂದ ಹೊರ ಬಂದ ಸಚಿವರು ಚುನಾವಣಾ ಪ್ರಚಾರಕ್ಕೆ ತೆರಳಿದ್ದಾರೆ.

ADVERTISEMENT

ಮಾಹಿತಿ ಇಲ್ಲ ಎಂದ ಸಿದ್ದರಾಮಯ್ಯ: ‘ಸಚಿವ ಮಹದೇವಪ್ಪ ಅವರ ಮನೆ ಮೇಲೆ ಐಟಿ ದಾಳಿ ಆಗಿರುವ ಬಗ್ಗೆ ನನಗೆ ಮಾಹಿತಿ ಇಲ್ಲ. ಒಂದು ವೇಳೆ ದಾಳಿ ನಡೆದಿದ್ದರೆ, ಅದು ರಾಜಕೀಯ ಪ್ರೇರಿತ. ಕೇಂದ್ರ ಸರ್ಕಾರ ಐಟಿ ಇಲಾಖೆಯನ್ನು ದುರುಪಯೋಗ ಮಾಡಿಕೊಳ್ಳುತ್ತಿದೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹುಬ್ಬಳ್ಳಿಯಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.