ADVERTISEMENT

ಸಮಸ್ಯೆ ಬಗೆಹರಿದಿದೆ; ಮಂತ್ರಿ ಸ್ಥಾನದ ಭರವಸೆ ಸಿಕ್ಕಿದೆ– ಪ್ರತಾಪ್‌ಗೌಡ

​ಪ್ರಜಾವಾಣಿ ವಾರ್ತೆ
Published 27 ಮೇ 2018, 19:30 IST
Last Updated 27 ಮೇ 2018, 19:30 IST
ಪ್ರತಾಪ್‌ಗೌಡ ಪಾಟೀಲ
ಪ್ರತಾಪ್‌ಗೌಡ ಪಾಟೀಲ   

ಮಸ್ಕಿ (ರಾಯಚೂರು ಜಿಲ್ಲೆ): ‘ಕಾಂಗ್ರೆಸ್ ಹೈಕಮಾಂಡ್‌ಗೆ ಕೆಲ ವಿಷಯ ಮುಟ್ಟಿಸಬೇಕಿದ್ದ ಕಾರಣ ನಾನು ಎರಡು ದಿನ ಬೇರೆ ಕಡೆ ಹೋಗಿದ್ದೆ. ಸದ್ಯಕ್ಕೆ ಸಮಸ್ಯೆ ಬಗೆಹರಿದಿದ್ದು, ನನಗೆ ಸಚಿವ ಸ್ಥಾನದ ಭರವಸೆ ಸಿಕ್ಕಿದೆ’ ಎಂದು ಶಾಸಕ ಪ್ರತಾಪ್‌ಗೌಡ ಪಾಟೀಲ ಹೇಳಿದರು.

‘ಯಾವುದೋ ಕಾರಣಕ್ಕೆ ಎರಡು ದಿನ ಬೇರೆ ಕಡೆ ಹೋಗಿದ್ದೆ. ಆದರೆ, ಕೆಲವರು ನಾಪತ್ತೆಯಾಗಿದ್ದಾರೆ ಎಂದು ವದಂತಿ ಹಬ್ಬಿಸಿದ್ದರು. ಈಗ ಎಲ್ಲ ಗೊಂದಲಗಳಿಗೆ ತೆರೆ ಎಳೆಯಲಾಗಿದೆ. ಪಕ್ಷದ ರಾಜ್ಯ ಘಟಕದ ಅಧ್ಯಕ್ಷರು, ಹಿರಿಯ ಮುಖಂಡರು ನನ್ನ ಜತೆ ಚರ್ಚಿಸಿದ್ದಾರೆ. ಸತತ ಮೂರು ಬಾರಿ ಆಯ್ಕೆಯಾಗಿರುವ ನನಗೆ ಹಿರಿತನ ನೋಡಿ ಸಚಿವ ಸ್ಥಾನ ನೀಡುವಂತೆ ಮನವಿ ಮಾಡಿದ್ದೇನೆ’ ಎಂದು ಭಾನುವಾರ ಇಲ್ಲಿ ಸುದ್ದಿಗಾರರಿಗೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT