ಬೆಂಗಳೂರು: ರಸ್ತೆ ಬದಿಯಲ್ಲಿ ಸಸಿಗಳನ್ನು ನೆಟ್ಟು ಅವುಗಳನ್ನೇ ಮಕ್ಕಳಂತೆ ಭಾವಿಸಿ ಬೆಳೆಸಿದ ಪರಿಸರವಾದಿ ಸಾಲು ಮರದ ತಿಮ್ಮಕ್ಕ ನಿಧನರಾಗಿದ್ದಾರೆ ಎಂಬ ಸುದ್ದಿ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ವಾಟ್ಸ್ ಆ್ಯಪ್ ನಲ್ಲಿ ಮೃತದೇಹದ ಚಿತ್ರವೊಂದರ ಜತೆಗೆ ಸಾಲು ಮರದ ತಿಮ್ಮಕ್ಕ ಇನ್ನಿಲ್ಲ ಎಂಬ ಸಂದೇಶ ಎಲ್ಲೆಡೆ ಹರಿದಾಡಿದೆ.
ಆದರೆ ಅದು ಸುಳ್ಳು ಸುದ್ದಿ, ವದಂತಿಗೆ ಕಿವಿಗೊಡಬೇಡಿ. ತಿಮ್ಮಕ್ಕ ಆರೋಗ್ಯದಿಂದಿದ್ದಾರೆ ಎಂದು ಅವರ ಮಗ ಉಮೇಶ್ ವನಸಿರಿ ಹೇಳಿದ್ದಾರೆ.
</p></p>
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.