ಬೆಂಗಳೂರು: ಕೇಂದ ಆಡಳಿತ ನ್ಯಾಯಮಂಡಳಿ (ಸಿಎಟಿ) ಆದೇಶ ಪ್ರಶ್ನಿಸಿ ಹಾಸನ ಜಿಲ್ಲಾಧಿಕಾರಿಯಾಗಿದ್ದ ರೋಹಿಣಿ ಸಿಂಧೂರಿ ಅವರು ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ.
ವರ್ಗಾವಣೆ ಮಾಡಿರುವ ಸ್ಥಳಕ್ಕೆ ತೆರಳುವಂತೆ ಸಿಎಟಿ ಆದೇಶಿಸಿತ್ತು. ಇದುನ್ನು ರೋಹಿಣಿ ಪ್ರಶ್ನಿಸಿದ್ದಾರೆ.
ಸರ್ಕಾರ ಉದ್ಯೋಗ ಮತ್ತು ತರಬೇತಿ ಇಲಾಖೆಗೆ ವರ್ಗಾವಣೆ ಮಾಡಿತ್ತು.
ಹಾಲಿ ಹಾಸನ ಜಿಲ್ಲಾಧಿಕಾರಿ ರಂದೀಪ್ ಅವರಿಂದ ಕೆವಿಯಟ್ ಸಲ್ಲಿಕೆಯಾಗಿದೆ.
ತಮ್ಮ ವಾದ ಆಲಿಸದೆ ಯಾವುದೇ ಆದೇಶ ನೀಡದಂತೆ ಮನವಿ ಮಾಡಲಾಗಿದೆ.
ತಮ್ಮ ವರ್ಗಾವಣೆ ಆದೇಶ ಪ್ರಶ್ನಿಸಿದ್ದ ರೋಹಿಣಿ ಸಿಂಧೂರಿ ಅವರ ಅರ್ಜಿಯನ್ನು ಸಿಎಟಿ ಏ.17ರಂದು ವಜಾ ಮಾಡಿತ್ತು.
* ಇವನ್ನೂ ಓದಿ...
* ರೋಹಿಣಿ ಸಿಂಧೂರಿ ಅರ್ಜಿ ವಜಾ
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.