ಹುಬ್ಬಳ್ಳಿ: ಹುಬ್ಬಳ್ಳಿ–ಧಾರವಾಡ, ಗದಗ ಜಿಲ್ಲೆಯ ಡಂಬಳ, ಉತ್ತರಕನ್ನಡ ಜಿಲ್ಲೆಯ ಕಾರವಾರ, ದಾಂಡೇಲಿಯಲ್ಲಿ ಮಂಗಳವಾರ ಸಂಜೆ ಮಳೆಯಾಗಿದೆ. ಹುಬ್ಬಳ್ಳಿಯಲ್ಲಿ ಸುಮಾರು 20 ನಿಮಿಷ ಧಾರಾಕಾರವಾಗಿ ಮಳೆ ಸುರಿಯಿತು.
ಡಂಬಳದಲ್ಲಿ ಮಳೆ ಸುರಿಯುವ ಸಂದರ್ಭದಲ್ಲಿ ಸಿಡಿಲು ಬಡಿದು ಮುರ್ತುಜಾ ಇಸ್ಮಾಯಿಲ್ ಸಾಬ್ ಹೊಂಬಳ (22) ಎಂಬ ಯುವಕ ಮೃತಪಟ್ಟಿದ್ದಾನೆ. ಕೆಲಸ ಮುಗಿಸಿಕೊಂಡು ಹೊಲದಿಂದ ಮನೆಗೆ ಹಿಂದಿರುಗುವಾಗ ಸಿಡಿಲು ಬಡಿದಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.