ADVERTISEMENT

ಸುಗ್ಗನಹಳ್ಳಿ: ಚಿರತೆ ಸೆರೆ

​ಪ್ರಜಾವಾಣಿ ವಾರ್ತೆ
Published 17 ಏಪ್ರಿಲ್ 2014, 19:30 IST
Last Updated 17 ಏಪ್ರಿಲ್ 2014, 19:30 IST
ಸುಗ್ಗನಹಳ್ಳಿ ಗ್ರಾಮದಲ್ಲಿ ಬೋನಿಗೆ ಬಿದ್ದ ಚಿರತೆ
ಸುಗ್ಗನಹಳ್ಳಿ ಗ್ರಾಮದಲ್ಲಿ ಬೋನಿಗೆ ಬಿದ್ದ ಚಿರತೆ   

ಚನ್ನರಾಯಪಟ್ಟಣ: ಶ್ರವಣಬೆಳಗೊಳ ಹೋಬಳಿ ಸುಗ್ಗನಹಳ್ಳಿ ಗ್ರಾಮದ ಹೊರವಲಯದಲ್ಲಿರುವ ತೋಟದಲ್ಲಿ ಇಟ್ಟಿದ್ದ ಬೋನಿಗೆ ಮೂರು ವರ್ಷದ ಗಂಡು ಚಿರತೆ ಗುರುವಾರ ಮುಂಜಾನೆ ಸೆರೆ ಸಿಕ್ಕಿದೆ.

ಗ್ರಾಮದಲ್ಲಿ ಚಿರತೆ ಹಾವಳಿ ಹೆಚ್ಚಾಗಿ­ದ್ದರಿಂದ ಅರಣ್ಯ ಇಲಾಖೆ ಐದು ದಿನಗಳ ಹಿಂದೆ ಬೋನು ಇರಿಸಿ ಅದರ ಒಳಗೆ ನಾಯಿಯನ್ನು ಕಟ್ಟಿಹಾಕಿತ್ತು. ನಾಯಿ­ಯನ್ನು ತಿನ್ನಲು ಬಂದು ಚಿರತೆ ಬೋನಿಗೆ ಬಿದ್ದಿದೆ.

ಚಿರತೆಯನ್ನು ನಾಗರಹೊಳೆ ಅರಣ್ಯ ಪ್ರದೇಶಕ್ಕೆ ಬಿಡಲಾಯಿತು ಎಂದು ವಲಯ ಅರಣ್ಯಾಧಿಕಾರಿ ಎ.ಈ. ಧರ್ಮಪ್ಪ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.