ADVERTISEMENT

ಸುಪ್ರೀಂ ಮೊರೆ ಹೋಗಲು ಎಸಿಬಿ ಚಿಂತನೆ

​ಪ್ರಜಾವಾಣಿ ವಾರ್ತೆ
Published 21 ಸೆಪ್ಟೆಂಬರ್ 2017, 20:02 IST
Last Updated 21 ಸೆಪ್ಟೆಂಬರ್ 2017, 20:02 IST

ಬೆಂಗಳೂರು: ಯಡಿಯೂರಪ್ಪ ವಿರುದ್ಧದ ಎಫ್.ಐ.ಆರ್ ರದ್ದುಗೊಳಿಸಿ ಹೈಕೋರ್ಟ್ ಆದೇಶ ನೀಡಿದರೆ ಸುಪ್ರೀಂ ಕೋರ್ಟ್ ಮೊರೆ ಹೋಗಲು ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಚಿಂತನೆ ನಡೆಸಿದೆ.

ಪ್ರಕರಣದ ಅದೇಶ ಶುಕ್ರವಾರ ಪ್ರಕಟವಾಗಲಿರುವ ಕಾರಣ ಎಸಿಬಿ ಕಚೇರಿಯಲ್ಲಿ ಅಧಿಕಾರಿಗಳು ಗುರುವಾರ ರಾತ್ರಿ ತುರ್ತು ಸಭೆ ನಡೆಸಿದರು. ಮುಂದಿನ ನಡೆಯ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮಾಹಿತಿ ನೀಡಿದ ಅಧಿಕಾರಿಗಳು, ಗೃಹ ಸಚಿವ ರಾಮಲಿಂಗಾರೆಡ್ಡಿ ಅವರೊಂದಿಗೂ ಚರ್ಚೆ ನಡೆಸಿದ್ದಾರೆ ಎಂದೂ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT