ADVERTISEMENT

ಸೋಮಶೇಖರ ಇಮ್ರಾಪುರಗೆ ಬೆಟಗೇರಿ ಕೃಷ್ಣಶರ್ಮ ಪ್ರಶಸ್ತಿ

​ಪ್ರಜಾವಾಣಿ ವಾರ್ತೆ
Published 7 ಏಪ್ರಿಲ್ 2015, 19:30 IST
Last Updated 7 ಏಪ್ರಿಲ್ 2015, 19:30 IST

ಬೆಳಗಾವಿ: ಡಾ. ಬೆಟಗೇರಿ ಕೃಷ್ಣಶರ್ಮ ಜಾನಪದ ಪ್ರಶಸ್ತಿಗೆ ಜಾನಪದ ತಜ್ಞ, ಸಂಶೋಧಕ ಡಾ. ಸೋಮಶೇಖರ ಇಮ್ರಾಪುರ ಅವರು ಆಯ್ಕೆಯಾಗಿದ್ದಾರೆ.

ಪ್ರಶಸ್ತಿಯು ₹ 1 ಲಕ್ಷ ನಗದು ಹಾಗೂ ಸ್ಮರಣಿಕೆ ಒಳಗೊಂಡಿದೆ. ಇದೇ 16ರಂದು ನಡೆಯಲಿರುವ ಸಮಾರಂಭದಲ್ಲಿ ಮಂಗಳೂರು ವಿ.ವಿ. ವಿಶ್ರಾಂತ ಕುಲಪತಿ ಡಾ. ವಿವೇಕ ರೈ ಪ್ರಶಸ್ತಿ ಪ್ರದಾನ ಮಾಡುವರು  ಎಂದು ಪ್ರತಿಷ್ಠಾನದ ಅಧ್ಯಕ್ಷ ಪ್ರೊ. ರಾಘವೇಂದ್ರ ಪಾಟೀಲ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಅಂಬಳಿಕೆ ಹಿರಿಯಣ್ಣ, ದುರ್ಗಾದಾಸ್‌ ಹಾಗೂ ವೀರಣ್ಣ ದಂಡೆ ಅವರಿದ್ದ ಸಮಿತಿ ಇಮ್ರಾಪುರ ಅವರನ್ನು ಆಯ್ಕೆ ಮಾಡಿದೆ ಎಂದು ಅವರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.