ಬೆಂಗಳೂರು: 2016ನೇ ಸಾಲಿನ ಪಂಪ ಪ್ರಶಸ್ತಿಗೆ ಹಿರಿಯ ಸಂಶೋಧಕ ಡಾ. ಹಂ.ಪ. ನಾಗರಾಜಯ್ಯ ಮತ್ತು ದಾನ ಚಿಂತಾಮಣಿ ಅತ್ತಿಮಬ್ಬೆ ಪ್ರಶಸ್ತಿಗೆ ಸಾಹಿತಿ ಶಾಂತಿ ನಾಯಕ ಅವರನ್ನು ಆಯ್ಕೆ ಮಾಡಲಾಗಿದೆ.
ಇತರೆ ಪ್ರಶಸ್ತಿಗಳಿಗೆ ಆಯ್ಕೆಯಾದವರ ವಿವರ:
ಪ್ರೊ. ಕೆ.ಜಿ. ಕುಂದಣಗಾರ ಗಡಿನಾಡ ಸಾಹಿತ್ಯ ಪ್ರಶಸ್ತಿ : ಹಸನ್ ನಯೀಂ ಸುರಕೋಡ
ಸಂಗೊಳ್ಳಿ ರಾಯಣ್ಣ ಪ್ರಶಸ್ತಿ : ಡಾ. ಚೆನ್ನಣ್ಣ ವಾಲೀಕಾರ
ಸಂತ ಶಿಶುನಾಳ ಷರೀಫ ಪ್ರಶಸ್ತಿ : ವೈ.ಕೆ. ಮುದ್ದುಕೃಷ್ಣ
ನಿಜಗುಣ ಪುರಂದರ ಪ್ರಶಸ್ತಿ : ಗಣಪತಿ ಭಟ್ ಹಾಸಣಗಿ
ಕುಮಾರವ್ಯಾಸ ಪ್ರಶಸ್ತಿ : ಎನ್.ಆರ್. ಜ್ಞಾನಮೂರ್ತಿ
ಈ ಎಲ್ಲಾ ಪ್ರಶಸ್ತಿಗಳು ತಲಾ ₹ 3 ಲಕ್ಷ ನಗದು ಪುರಸ್ಕಾರ, ಸ್ಮರಣಿಕೆ ಹಾಗೂ ಪ್ರಶಸ್ತಿ ಫಲಕವನ್ನು ಹೊಂದಿರುತ್ತವೆ. ಪ್ರಶಸ್ತಿ ಪ್ರದಾನ ದಿನಾಂಕವನ್ನು ಸದ್ಯದಲ್ಲೇ ಪ್ರಕಟಿಸಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಖಾತೆ ಸಚಿವೆ ಉಮಾಶ್ರೀ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.