ADVERTISEMENT

ಹಾಲಿನಪುಡಿ ಮಾರಾಟ: ಮುಖ್ಯ ಶಿಕ್ಷಕಿ ಅಮಾನತು

​ಪ್ರಜಾವಾಣಿ ವಾರ್ತೆ
Published 28 ಆಗಸ್ಟ್ 2014, 20:07 IST
Last Updated 28 ಆಗಸ್ಟ್ 2014, 20:07 IST

ಬಳ್ಳಾರಿ: ‘ಕ್ಷೀರಭಾಗ್ಯ’ ಯೋಜನೆ ಅಡಿ ವಿದ್ಯಾರ್ಥಿಗಳಿಗೆ ವಿತರಿಸಲು ಸರ್ಕಾರ ಪೂರೈಸಿದ ಹಾಲಿನಪುಡಿಯನ್ನು ಕಾಳಸಂತೆಯಲ್ಲಿ ಮಾರಾಟ ಮಾಡಿದ ಆರೋಪ ಎದುರಿಸುತ್ತಿರುವ ನಗರದ ಗುಗ್ಗರಹಟ್ಟಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕಿ ನಾಗರತ್ನಮ್ಮ ಅವರನ್ನು ಗುರುವಾರ ಅಮಾನತು ಮಾಡಲಾಗಿದೆ.

ಶಾಲೆಯಿಂದ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 50 ಕೆ.ಜಿ. ಹಾಲಿನಪುಡಿಯನ್ನು ಸಾರ್ವಜನಿಕರೇ ವಶಪಡಿಸಿಕೊಂಡು ಬುಧವಾರ ಪೊಲೀಸರಿಗೆ ಒಪ್ಪಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.