ಹಾಸನ: ವಿದ್ಯುತ್ ತಂತಿ ತಗುಲಿ ಮೂವರು ಸಾವಿಗೀಡಾಗಿದ್ದಾರೆ.
ಹಾಸನ ತಾಲೂಕು ಶಂಕರನಹಳ್ಳಿ ಬಳಿ ಈ ದುರ್ಘಟನೆ ಸಂಭವಿಸಿದೆ. ವಿದ್ಯುತ್ ಪ್ರವಹಿಸಿ ಗೋಪನಹಳ್ಳಿ ಗ್ರಾಮದ ರವಿ(56), ಪ್ರಸಾದ್(23) ಮತ್ತು ಕಿಟ್ಟಿ (59)ಮೃತಪಟ್ಟಿದ್ದಾರೆ.
ದ್ವಿಚಕ್ರ ವಾಹನದಲ್ಲಿ ತೆರಳುತಿದ್ದಾಗ ದುರಂತ ನಡೆದಿದೆ. ಮಳೆ, ಗಾಳಿಗೆ ತುಂಡಾಗಿ ರಸ್ತೆಗೆ ಬಿದ್ದಿದ್ದ ವಿದ್ಯುತ್ ತಂತಿಯ ಸಮೀಪವೇ ಬೈಕ್ ಹಾದು ಹೋಗುವಾಗ ವಿದ್ಯುತ್ ಪ್ರವಹಿಸಿ ಸ್ಥಳದಲ್ಲಿಯೇ ಮೂವರೂ ಸಾವಿಗೀಡಾಗಿದ್ದಾರೆ.
ಹಾಸನ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.