ADVERTISEMENT

ಹಾಸ್ಯ ಸಾಹಿತಿ ಅರಾಸೇ ನಿಧನ

​ಪ್ರಜಾವಾಣಿ ವಾರ್ತೆ
Published 10 ಏಪ್ರಿಲ್ 2015, 19:59 IST
Last Updated 10 ಏಪ್ರಿಲ್ 2015, 19:59 IST

ಚಿತ್ರದುರ್ಗ:  ಹಾಸ್ಯ ಸಾಹಿತಿ, ಅರಾಸೇ ಕಾವ್ಯನಾಮದಿಂದ ಪರಿಚಿತರಾಗಿದ್ದ ಎ.ಆರ್.ಸೇತೂರಾಮರಾವ್ (84) ಅವರು ಅನಾರೋಗ್ಯದಿಂದ ಗುರುವಾರ ರಾತ್ರಿ ಬೆಂಗಳೂರಿನ ಸ್ವಗೃಹದಲ್ಲಿ ನಿಧನರಾದರು. ಮೃತರಿಗೆ ಒಬ್ಬ ಪುತ್ರಿ, ಒಬ್ಬ ಪುತ್ರ ಇದ್ದಾರೆ.

ಮೃತರ ಅಂತ್ಯಕ್ರಿಯೆ ಶುಕ್ರವಾರ ಬೆಂಗಳೂರಿನಲ್ಲಿ ನಡೆಯಿತು ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಭರಮಸಾಗರದವರಾದ ಅರಾಸೇ ಅವರು ಬೆಂಗಳೂರಿನ ತ್ಯಾಗರಾಜನಗರದಲ್ಲಿ ಮಕ್ಕಳೊಂದಿಗೆ ನೆಲೆಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.