ಚಿತ್ರದುರ್ಗ: ಹಿರಿಯೂರು ತಾಲ್ಲೂಕಿನ ದಿಂಡಾವರ, ಗೌಡನಹಳ್ಳಿ ಅರಣ್ಯ ಪ್ರದೇಶದಲ್ಲಿ ಭಾನುವಾರ ಬೆಳಿಗ್ಗೆ ಎರಡು ಆನೆಗಳು ಕಾಣಿಸಿಕೊಂಡು ಆತಂಕದ ವಾತಾವರಣ ಸೃಷ್ಟಿಸಿವೆ.
ತುಮಕೂರು ಜಿಲ್ಲೆಯ ಅರಣ್ಯಪ್ರದೇಶದಿಂದ ಆನೆಗಳು ಬಂದಿರಬಹುದೆಂದು ಅಂದಾಜಿಸಲಾಗಿದೆ. ಹಿರಿಯೂರು ಆರ್.ಎಫ್.ಒ ಮತ್ತು ಸಿಬ್ಬಂದಿ ಆನೆಗಳನ್ನು ಓಡಿಸುವ ಪ್ರಯತ್ನದಲ್ಲಿದ್ದಾರೆ.
ಯಾವುದೇ ಅನಾಹುತ ಸಂಭವಿಸಿದ ವರದಿಯಾಗಿಲ್ಲ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.