ಉಡುಪಿ: ಮಂಗಳೂರಿನ ಜೋಕಟ್ಟೆ ನಿವಾಸಿ ದನದ ವ್ಯಾಪಾರಿ ಹುಸೇನಬ್ಬ ಕೊಲೆ ಪ್ರಕರಣದಲ್ಲಿ ಮೂವರು ಆರೋಪಿಗಳಿಗೆ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಸೋಮವಾರ ಜಾಮೀನು ಮಂಜೂರು ಮಾಡಿದ್ದು, ಉಳಿದ 8 ಆರೋಪಿಗಳು ಸಲ್ಲಿಸಿದ್ದ ಜಾಮೀನು ಅರ್ಜಿ ವಜಾಗೊಳಿಸಿದೆ.
ಆರೋಪಿಗಳಾದ ಮೋಹನ್ ಕೊತ್ವಾಲ್, ಪ್ರಸಾದ್ ಕೊಂಡಾಡಿ ಅವರಿಗೆ ಜಾಮೀನು, ತುಕಾರಾಂ ಅವರಿಗೆ ನಿರೀಕ್ಷಣಾ ಜಾಮೀನು ಸಿಕ್ಕಿದೆ.
ಉಡುಪಿಗೆ ಸಿಐಡಿ ತಂಡ: ಮತ್ತೊಂದೆಡೆ ಸೋಮವಾರ ಉಡುಪಿಗೆ ಬಂದ ಸಿಐಡಿ ಅಧಿಕಾರಿಗಳ ತಂಡವು ಹುಸೇನಬ್ಬ ಪ್ರಕರಣದ ತನಿಖೆಯನ್ನು ಕೈಗೆತ್ತಿಕೊಂಡಿದೆ.
ಸಿಐಡಿ ಡಿವೈಎಸ್ಪಿ ಚಂದ್ರಶೇಖರ್ ನೇತೃತ್ವದ 11 ಅಧಿಕಾರಿಗಳ ತಂಡವು ಹುಸೇನಬ್ಬ ಕೊಲೆಯಾದ ಪೆರ್ಡೂರಿಗೆ ತೆರಳಿ ಮಾಹಿತಿ ಸಂಗ್ರಹಿಸಿತು. ಘಟನೆ ನಡೆದ ಸ್ಥಳ ಹಾಗೂ ಹುಸೇನಬ್ಬ ಶವವನ್ನು ಸಾಗಿಸಲಾಗಿದ್ದ ಸ್ಥಳದ ಪರಿಶೀಲನೆ ನಡೆಸಲಾಯಿತು ಎಂದು ಮೂಲಗಳು ತಿಳಿಸಿವೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.