ADVERTISEMENT

11 ನಿರುಪಯುಕ್ತ ಬಸ್‌ ಭಸ್ಮ

​ಪ್ರಜಾವಾಣಿ ವಾರ್ತೆ
Published 28 ಫೆಬ್ರುವರಿ 2018, 19:30 IST
Last Updated 28 ಫೆಬ್ರುವರಿ 2018, 19:30 IST
11 ನಿರುಪಯುಕ್ತ ಬಸ್‌ ಭಸ್ಮ
11 ನಿರುಪಯುಕ್ತ ಬಸ್‌ ಭಸ್ಮ   

ಕಲಬುರ್ಗಿ: ಇಲ್ಲಿನ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವಿಭಾಗೀಯ ಕಾರ್ಯಾಗಾರ–2ರಲ್ಲಿ ಬುಧವಾರ ಮಧ್ಯಾಹ್ನ 1ರ ಸುಮಾರಿಗೆ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು, 11 ನಿರುಪಯುಕ್ತ ಬಸ್‌ಗಳು ಹಾಗೂ ನೂರಾರು ಟೈರ್‌ಗಳು ಭಸ್ಮವಾಗಿವೆ.

₹20 ಲಕ್ಷ ಹಾನಿಯಾಗಿರುವ ಅಂದಾಜಿದೆ ಎಂದು ಮೂಲಗಳು ತಿಳಿಸಿವೆ. ಈ ಕಾರ್ಯಾಗಾರ ನಗರದೊಳಗೆ ಇದೆ. ಇಡೀ ಆವರಣದಲ್ಲಿ ದಟ್ಟ ಹೊಗೆ ಆವರಿಸಿದ್ದರಿಂದ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಸುತ್ತಲಿನ ಕೆಲವರು ಭಯಭೀತರಾಗಿ ತಮ್ಮ ಮನೆಗಳ ಸಿಲಿಂಡರ್‌ಗಳನ್ನು ಬೇರೆಡೆ ಸ್ಥಳಾಂತರಿಸಿದರು. ಸ್ಥಳದಲ್ಲಿ ಜಮಾಯಿಸಿದ್ದ ಜನರನ್ನು ಚದುರಿಸಲು ಪೊಲೀಸರು ಹರಸಾಹಸ ಪಡಬೇಕಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT