ADVERTISEMENT

15 ಪತ್ರಕರ್ತರಿಗೆ ಅಕಾಡೆಮಿ ಪ್ರಶಸ್ತಿ

​ಪ್ರಜಾವಾಣಿ ವಾರ್ತೆ
Published 3 ಫೆಬ್ರುವರಿ 2017, 19:30 IST
Last Updated 3 ಫೆಬ್ರುವರಿ 2017, 19:30 IST
15 ಪತ್ರಕರ್ತರಿಗೆ ಅಕಾಡೆಮಿ ಪ್ರಶಸ್ತಿ
15 ಪತ್ರಕರ್ತರಿಗೆ ಅಕಾಡೆಮಿ ಪ್ರಶಸ್ತಿ   

ಬೆಂಗಳೂರು: ಡೆಕ್ಕನ್ ಹೆರಾಲ್ಡ್‌ ಪತ್ರಿಕೆಯ ಮಂಗಳೂರು ಬ್ಯುರೊ ಮುಖ್ಯಸ್ಥ ರೊನಾಲ್ಡ್ ಫರ್ನಾಂಡಿಸ್‌, ಹಿರಿಯ ಪತ್ರಕರ್ತ ಎಚ್‌.ಆರ್‌. ಶ್ರೀಶ ಸೇರಿದಂತೆ 15 ಪತ್ರಕರ್ತರಿಗೆ ಮಾಧ್ಯಮ ಅಕಾಡೆಮಿಯ 2016ನೇ ಸಾಲಿನ ಪ್ರಶಸ್ತಿ ದೊರೆತಿದೆ. ಈ ಪ್ರಶಸ್ತಿ ₹ 20 ಸಾವಿರ ನಗದು ಮತ್ತು ಫಲಕ ಒಳಗೊಂಡಿದೆ.

ಜಿಲ್ಲಾ ಪತ್ರಿಕೆಗೆ ನೀಡುವ ‘ಆಂದೋಲನ ಪ್ರಶಸ್ತಿ’ಯು ಶಿವಮೊಗ್ಗ ಟೈಮ್ಸ್‌, ಸಾಮಾಜಿಕ ಸಮಸ್ಯೆ ಲೇಖನಕ್ಕೆ ನೀಡುವ ‘ಅಭಿಮಾನಿ ಪ್ರಶಸ್ತಿ’ಯು ಚಂದ್ರಶೇಖರ ಮೋರೆ, ಮಾನವೀಯ ಲೇಖನಕ್ಕೆ ನೀಡುವ ‘ಮೈಸೂರು ದಿಗಂತ ಪ್ರಶಸ್ತಿ’ಯು ಚಿ.ಜ. ರಾಜೀವ,

ಅತ್ಯುತ್ತಮ ಸಿನಿಮಾ ಪತ್ರಕರ್ತರಿಗೆ ನೀಡುವ ‘ಅರಗಿಣಿ ಪ್ರಶಸ್ತಿ’ಯು ಸ್ನೇಹಪ್ರಿಯ ನಾಗರಾಜ್‌, ತಳಸಮುದಾಯದ ಬಗೆಗಿನ ಬರಹಗಳ ಅಂಕಣಕಾರರಿಗೆ ನೀಡುವ ‘ಡಾ.ಬಿ.ಆರ್‌. ಅಂಬೇಡ್ಕರ್ ಮೂಕನಾಯಕ ಪ್ರಶಸ್ತಿ’ಯು ‘ಪ್ರಜಾವಾಣಿ’ಯ ಅಂಕಣಕಾರ ಡಾ. ನಟರಾಜ್ ಹುಳಿಯಾರ್ ಅವರಿಗೆ ಸಿಕ್ಕಿದೆ.

ಈ ಪ್ರಶಸ್ತಿ ₹ 10 ಸಾವಿರ ನಗದು ಮತ್ತು ಫಲಕ ಒಳಗೊಂಡಿದೆ ಎಂದು ಅಕಾಡೆಮಿ ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT