ಬೆಂಗಳೂರು: ಸಂವಿಧಾನದ ಕಲಂ 371ಜೆ ಪ್ರಕಾರ ಸರ್ಕಾರಿ ಕೋಟಾದ ಸ್ನಾತಕೋತ್ತರ ವೈದ್ಯಕೀಯ/ದಂತ ವೈದ್ಯಕೀಯ ಕೋರ್ಸ್ಗಳಲ್ಲಿ ಮೀಸಲಾತಿ ಪಡೆಯಲು ಪ್ರಮಾಣ ಪತ್ರ ಸಲ್ಲಿಸುವ ಅವಧಿಯನ್ನು ಮೇ 3ರವರೆಗೂ ವಿಸ್ತರಿಸಲಾಗಿದೆ.
ಅಧಿಕಾರಿಗಳು ಲೋಕಸಭೆ ಚುನಾವಣೆಯಲ್ಲಿ ನಿರತರಾಗಿದ್ದ ಕಾರಣ ವಿದ್ಯಾರ್ಥಿಗಳಿಗೆ ಸಕಾಲದಲ್ಲಿ ಪ್ರಮಾಣ ಪತ್ರಗಳನ್ನು ನೀಡಿಲ್ಲ. ಹೀಗಾಗಿ ಅವಧಿ ವಿಸ್ತರಿಸಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ ತಿಳಿಸಿದರು.
ಮೀಸಲಾತಿ ಬಯಸುವ ಅಭ್ಯರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಮೇ 3ರವರೆಗೂ ಪ್ರಮಾಣ ಪತ್ರ ನೀಡಬಹುದು ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.