ADVERTISEMENT

ಜಾನಪದಶ್ರೀ ಪ್ರಶಸ್ತಿ ಪ್ರಕಟ

​ಪ್ರಜಾವಾಣಿ ವಾರ್ತೆ
Published 3 ಜನವರಿ 2018, 19:30 IST
Last Updated 3 ಜನವರಿ 2018, 19:30 IST

ಬೆಂಗಳೂರು: 2017ನೇ ಸಾಲಿನ ಜಾನಪದಶ್ರೀ ಪ್ರಶಸ್ತಿಗೆ ಧಾರವಾಡದ ವೆಂಕಪ್ಪ ಪುಲಿ ಮತ್ತು ಬಾಗಲಕೋಟೆಯ ವೆಂಕಪ್ಪ ಅಂಬಾಜಿ ಸುಗತೇಕರ ಭಾಜನರಾಗಿದ್ದಾರೆ.

ಸಾಹಿತಿ ಕಾಳೇಗೌಡ ನಾಗವಾರ ಅಧ್ಯಕ್ಷತೆಯ ಆಯ್ಕೆ ಸಮಿತಿ ಶಿಫಾರಸಿನಂತೆ ಇದೇ ಮೊದಲ ಬಾರಿಗೆ ಇಬ್ಬರಿಗೆ ಪ್ರಶಸ್ತಿ ನೀಡಲಾಗುತ್ತಿದೆ. ತಲಾ ₹ 5 ಲಕ್ಷ ನಗದನ್ನು ಈ ಪ್ರಶಸ್ತಿ ಒಳಗೊಂಡಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT