ADVERTISEMENT

ಮಾಗಡಿಯ ಬಿಜೆಪಿ ಪರಿವರ್ತನಾ ಯಾತ್ರೆಗೆ ವಿದ್ಯಾರ್ಥಿಗಳ ಬಳಕೆ

​ಪ್ರಜಾವಾಣಿ ವಾರ್ತೆ
Published 17 ಜನವರಿ 2018, 6:59 IST
Last Updated 17 ಜನವರಿ 2018, 6:59 IST
ಮಾಗಡಿಯ ಬಿಜೆಪಿ ಪರಿವರ್ತನಾ ಯಾತ್ರೆಗೆ ವಿದ್ಯಾರ್ಥಿಗಳ ಬಳಕೆ
ಮಾಗಡಿಯ ಬಿಜೆಪಿ ಪರಿವರ್ತನಾ ಯಾತ್ರೆಗೆ ವಿದ್ಯಾರ್ಥಿಗಳ ಬಳಕೆ   

ಮಾಗಡಿ: ಇಲ್ಲಿ ನಡೆದಿರುವ ಬಿಜೆಪಿ ಪರಿವರ್ತನಾ ಯಾತ್ರೆಗೆ ಕಾಲೇಜು ವಿದ್ಯಾರ್ಥಿಗಳನ್ನು ಬಳಸಿಕೊಳ್ಳಲಾಗಿದೆ.

ಯಡಿಯೂರಪ್ಪ ಅವರು ಕೆಂಪೇಗೌಡರ ಪುತ್ಥಳಿಗೆ ಮಾಲಾರ್ಪಣೆ ಮಾಡುವ ವೇಳೆ ಕಾಲೇಜು ವಿದ್ಯಾರ್ಥಿಗಳೇ ಹೆಚ್ಚಿನ ಸಂಖ್ಯೆಯಲ್ಲಿ ಇದ್ದರು‌.‌

ಪಟ್ಟಣದ ಐಟಿಐ ಸಂಸ್ಥೆಯೊಂದರ ವಿದ್ಯಾರ್ಥಿಗಳು ಸಮವಸ್ತ್ರದಲ್ಲಿಯೇ ಕೊರಳಿಗೆ ಬಿಜೆಪಿ ಚಿಹ್ನೆಯುಳ್ಳ ವಸ್ತ್ರ ಸುತ್ತಿಕೊಂಡಿರುವುದು ಕಂಡು ಬಂದಿತು.

ADVERTISEMENT

ಅಲ್ಲದೆ ಸ್ಥಳದಲ್ಲಿ ಇದ್ದ ವಿದ್ಯಾರ್ಥಿಗಳ ಹೆಸರನ್ನೂ ಪಟ್ಟಿ ಮಾಡಿಕೊಳ್ಳುತ್ತಿದ್ದ ದೃಶ್ಯ ಕಣ್ಣಿಗೆ ಬಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.