ADVERTISEMENT

ಗೋಹತ್ಯೆ ನಿಷೇಧಕ್ಕೆ ರಕ್ತದಲ್ಲಿ ಪತ್ರ ಬರೆದ ಸ್ವಾಮೀಜಿಗಳು

​ಪ್ರಜಾವಾಣಿ ವಾರ್ತೆ
Published 20 ಜನವರಿ 2018, 8:17 IST
Last Updated 20 ಜನವರಿ 2018, 8:17 IST
ಗೋಹತ್ಯೆ ನಿಷೇಧಕ್ಕೆ ರಕ್ತದಲ್ಲಿ ಪತ್ರ ಬರೆದ ಸ್ವಾಮೀಜಿಗಳು
ಗೋಹತ್ಯೆ ನಿಷೇಧಕ್ಕೆ ರಕ್ತದಲ್ಲಿ ಪತ್ರ ಬರೆದ ಸ್ವಾಮೀಜಿಗಳು   

ಮೈಸೂರು: ಗೋಹತ್ಯೆ ನಿಷೇಧಕ್ಕೆ ಆಗ್ರಹಿಸಿ ಹಾಗೂ ದೇಸಿ ತಳಿಯ ಗೋವುಗಳನ್ನು ರಕ್ಷಿಸುವಂತೆ ಒತ್ತಾಯಿಸಿ ಐವರು ಸ್ವಾಮೀಜಿಗಳು ಪ್ರಧಾನಮಂತ್ರಿ ಹಾಗೂ ಮುಖ್ಯಮಂತ್ರಿಗೆ ರಕ್ತದಲ್ಲಿ ಪತ್ರ ಬರೆದರು.

ಇಲ್ಲಿನ ಅಗ್ರಹಾರದ ಹೊಸಮಠದಲ್ಲಿ ಭಾರತೀಯ ಗೋ ಪರಿವಾರ ಶನಿವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿದ ಸ್ವಾಮೀಜಿಗಳು ರಾಜ್ಯ ಮತ್ತು ಕೇಂದ್ರ ಸರ್ಕಾರದ ಮೇಲೆ ಒತ್ತಡ ತರಲು ಈ ಪತ್ರ ಬರೆದರು.

ಹೊಸಮಠದ ಚಿದಾನಂದ ಸ್ವಾಮೀಜಿ, ಮೇಲುಕೋಟೆಯ ಇಳೈ ಆಳ್ವಾರ್ ಸ್ವಾಮೀಜಿ, ನೀಲಕಂಠ ಮಠದ ಸಿದ್ದಮಲ್ಲ ಸ್ವಾಮೀಜಿ, ಸವಿತಾ ಸಮಾಜದ ಶ್ರೀಕರ ಬಸವಾನಂದ ಸ್ವಾಮೀಜಿ, ತ್ರಿಪುರ ಭೈರವಿ ಮಠದ ಕೃಷ್ಣ ಮೋಹನಾನಂದ ಗಿರಿ ಗೋಸ್ವಾಮಿ ಪತ್ರ ಬರೆದವರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.