ಮಂಗಳೂರು: ಮತದಾರರ ಪಟ್ಟಿಯಲ್ಲಿ ಕೇರಳದ ವಿದ್ಯಾರ್ಥಿಗಳ ಹೆಸರು ಸೇರಿಸಲು ಯತ್ನಿಸುತ್ತಿರುವುದಾಗಿ ಆರೋಪಿಸಿದ ಸಾರ್ವಜನಿಕರು, ಇಲ್ಲಿನ ಮಹಾನಗರ ಪಾಲಿಕೆ ಚುನಾವಣಾ ಅಧಿಕಾರಿಯನ್ನು ತರಾಟೆಗೆ ತೆಗೆದುಕೊಂಡರು.
ಸೋಮವಾರ ಮಧ್ಯಾಹ್ನ ಚುನಾವಣಾ ಶಾಖೆಯಲ್ಲಿ ಕೇರಳದ ವಿದ್ಯಾರ್ಥಿಗಳ ಹೆಸರು ಸೇರ್ಪಡೆ ಮಾಡುತ್ತಿರುವ ಮಾಹಿತಿ ಪಡೆದ ಜನರು, ನೇರವಾಗಿ ಪಾಲಿಕೆ ಕಚೇರಿಗೆ ಬಂದು, ಅಧಿಕಾರಿಯನ್ನು ತರಾಟೆಗೆ ತೆಗೆದುಕೊಂಡರು.
ನಕಲಿ ಮತದಾನ ಮಾಡಿಸುವ ಉದ್ದೇಶದಿಂದಲೇ ಈ ರೀತಿ ಮಾಡಲಾಗುತ್ತಿದೆ. ಇದಕ್ಕೆ ರಾಜಕಾರಣಿಗಳು ಕುಮ್ಮಕ್ಕು ನೀಡುತ್ತಿದ್ದಾರೆ ಎಂದು ಆರೋಪಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.