ADVERTISEMENT

‘ಕನ್ನಡ ಶಾಸ್ತ್ರೀಯ ಭಾಷಾ ಕೇಂದ್ರ ಸ್ಥಳಾಂತರ ವಿಷಯ ಚರ್ಚೆ’

​ಪ್ರಜಾವಾಣಿ ವಾರ್ತೆ
Published 8 ಫೆಬ್ರುವರಿ 2018, 19:30 IST
Last Updated 8 ಫೆಬ್ರುವರಿ 2018, 19:30 IST
‘ಕನ್ನಡ ಶಾಸ್ತ್ರೀಯ ಭಾಷಾ ಕೇಂದ್ರ ಸ್ಥಳಾಂತರ ವಿಷಯ ಚರ್ಚೆ’
‘ಕನ್ನಡ ಶಾಸ್ತ್ರೀಯ ಭಾಷಾ ಕೇಂದ್ರ ಸ್ಥಳಾಂತರ ವಿಷಯ ಚರ್ಚೆ’   

ಬೆಂಗಳೂರು: ‘ಮೈಸೂರಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಕನ್ನಡ ಶಾಸ್ತ್ರೀಯ ಭಾಷಾ ಕೇಂದ್ರವನ್ನು ಬೆಂಗಳೂರಿಗೆ ಸ್ಥಳಾಂತರಿಸುವ ಬಗ್ಗೆ ಚರ್ಚೆ ನಡೆದಿದೆ. ಮುಂದಿನ ದಿನಗಳಲ್ಲಿ ಈ ಕುರಿತು ತೀರ್ಮಾನಿಸಲಾಗುವುದು’ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವೆ ಉಮಾಶ್ರೀ ತಿಳಿಸಿದರು.

ಜೆಡಿಎಸ್‌ನ ಕೆ. ಗೋಪಾಲಯ್ಯ ಅವರ ಪ್ರಶ್ನೆಗೆ ಉತ್ತರಿಸಿದ ಉಮಾಶ್ರೀ, ‘ಈ ಕೇಂದ್ರಕ್ಕೆ ರಾಜ್ಯ ಸರ್ಕಾರದಿಂದ ಯಾವುದೇ ಅನುದಾನ ನೀಡಿಲ್ಲ. ರಾಜ್ಯ ಸರ್ಕಾರದಿಂದ ಅನುದಾನ ನೀಡುವ ಕುರಿತು ಮುಖ್ಯಮಂತ್ರಿ ಜೊತೆ ಚರ್ಚಿಸುತ್ತೇನೆ’ ಎಂದರು.

ಮಧ್ಯಪ್ರವೇಶಿಸಿದ ಬಿಜೆಪಿಯ ಗೋವಿಂದ ಕಾರಜೋಳ, ಈ ಕೇಂದ್ರಕ್ಕೆ ಬಜೆಟ್‌ನಲ್ಲಿ ಹಣ ಮೀಸಲಿಡಬೇಕು ಎಂದು ಆಗ್ರಹಿಸಿದರು

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.