ಮೈಸೂರು: ಇಲ್ಲಿನ ಕುವೆಂಪು ನಗರದ ಕೆಲ ಮನೆಗಳಲ್ಲಿ ಭೂಮಿ ನಡುಗಿದ ಅನುಭವವಾಗಿದ್ದು, ಭೂಕಂಪ ಉಂಟಾಗಿದೆ ಎಂಬ ಆತಂಕ ಎದುರಾಗಿದೆ.
ಕುವೆಂಪುನಗರದ 3 ಮತ್ತು 8ನೇ ಕ್ರಾಸ್ ಕೆಲ ನಿವಾಸಿಗಳಿಗೆ ಭೂಮಿ ಕಂಪಿಸಿದ ಅನುಭವ ಆಗಿದೆ. ಮಧ್ಯಾಹ್ನ 12.35ಕ್ಕೆ ದೊಡ್ಡ ಶಬ್ಧ ಕೇಳಿ ಬಂದಿದೆ. ಅನೇಕರು ಮನೆಯಿಂದ ಹೊರಗೆ ಬಂದಿದ್ದಾರೆ.
ನೆಲದ ಮೇಲೆ ನಿಂತವರ ಕಾಲು ನಡುಗಿವೆ. ಕುಳಿತವರಿಗೆ ಭೂಮಿ ಕಂಪಿಸಿದಂತೆ ಆಗಿದೆ. ಎಲ್ಲರೂ ಮನೆಯಿಂದ ಹೊರಗೆ ಬಂದಿದ್ದಾರೆ. ಇದು ಭೂಕಂಪವೆ ಎಂಬುದು ಇನ್ನೂ ಖಚಿತವಾಗಿಲ್ಲ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.