ಬೆಂಗಳೂರು: ಬಿಜೆಪಿ ಸರ್ಕಾರದ ಅವಧಿಯಲ್ಲಿದ್ದ ಶೇ 7ರಷ್ಟು ಅಪರಾಧ ಪ್ರಮಾಣವನ್ನು ಶೇ 5ಕ್ಕೆ ಇಳಿಸುವಲ್ಲಿ ಕಾಂಗ್ರೆಸ್ ಸರ್ಕಾರ ಯಶಸ್ವಿಯಾಗಿದೆ ಎಂದು ಗೃಹ ಸಚಿವ ರಾಮಲಿಂಗಾ ರೆಡ್ಡಿ ಟ್ವೀಟಿಸಿದ್ದಾರೆ.
‘ಹೋದಲ್ಲೆಲ್ಲ ಬೆಂಗಳೂರು ಎಂದರೆ ಗೂಂಡಾ ವಿಷಯ, ನೈಟ್ಕ್ಲಬ್ ಜೂಜಾಟ, ಮಾದಕ ದ್ರವ್ಯ ಸರಬರಾಜು ಜಾಲ.. ಎಂಬುದೇ ಮಾತು. ಈ ಕುರಿತು ಏನು ಕ್ರಮ ತೆಗೆದುಕೊಳ್ಳುತ್ತೀರಿ’ ಎಂದು ಕೇಂದ್ರ ಸಚಿವ ಸದಾನಂದ ಗೌಡ ಗೃಹ ಸಚಿವ ರಾಮಲಿಂಗಾ ರೆಡ್ಡಿ ಅವರನ್ನು ಮಂಗಳವಾರ ಟ್ವಿಟರ್ನಲ್ಲಿ ಪ್ರಶ್ನಿಸಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.