ADVERTISEMENT

59 ಜನರಿಗಷ್ಟೆ ರಾಜ್ಯೋತ್ಸವ ಪ್ರಶಸ್ತಿ

​ಪ್ರಜಾವಾಣಿ ವಾರ್ತೆ
Published 25 ಅಕ್ಟೋಬರ್ 2014, 19:30 IST
Last Updated 25 ಅಕ್ಟೋಬರ್ 2014, 19:30 IST

ಬೆಂಗಳೂರು: ರಾಜ್ಯೋತ್ಸವ ಪ್ರಶಸ್ತಿಯನ್ನು ಈ ಬಾರಿ ಒಟ್ಟು 59 ಜನರಿಗೆ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯ ಆಯ್ಕೆ ಸಮಿತಿ ನಿರ್ಧರಿಸಿದೆ ಎಂದು ಗೊತ್ತಾಗಿದೆ.
ಸಮಿತಿಯ ಸದಸ್ಯರು ಸಿದ್ದರಾಮಯ್ಯ ಅವರನ್ನು ಶನಿವಾರ ಇಲ್ಲಿ ಭೇಟಿಯಾಗಿ ಪ್ರಶಸ್ತಿಗೆ ಪರಿಗಣಿಸಲು ಅರ್ಹರ ಹೆಸರುಗಳನ್ನು ಸಲ್ಲಿಸಿದ್ದಾರೆ. ‘ಪ್ರಾದೇಶಿಕ, ಸಾಮಾಜಿಕ ಮತ್ತು ಪ್ರತಿಭಾ ನ್ಯಾಯದ ಆಧಾರದಲ್ಲಿ ಅರ್ಹರ ಹೆಸರು ಆಯ್ಕೆ ಮಾಡಿ ಮುಖ್ಯಮಂತ್ರಿಗಳಿಗೆ ಸಲ್ಲಿಸಿದ್ದೇವೆ. ಪ್ರಶಸ್ತಿಗೆ ಅರ್ಹರ ಹೆಸರು ಅಂತಿಮಗೊಳಿಸುವುದು ಮುಖ್ಯಮಂತ್ರಿ ವಿವೇಚನೆಗೆ ಬಿಟ್ಟಿದ್ದು’ ಎಂದು ಸಭೆಯಲ್ಲಿ ಪಾಲ್ಗೊಂಡಿದ್ದ ಸದಸ್ಯರೊಬ್ಬರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.