ವಿಶ್ವ ಸಂಸ್ಥೆ: ಕಠುವಾ ಮತ್ತು ಉನ್ನಾವೊನಲ್ಲಿ ಬಾಲಕಿಯರ ಮೇಲೆ ನಡೆದಿರುವ ಅತ್ಯಾಚಾರ ಪ್ರಕರಣಗಳ ಬಗ್ಗೆ ವಿಷಾದ ವ್ಯಕ್ತಪಡಿಸಿರುವ ವಿಶ್ವಸಂಸ್ಥೆಯ ಅಧೀನ ಮಹಾ ಪ್ರಧಾನ ಕಾರ್ಯದರ್ಶಿ ಪುಮ್ಜಿಲ್ ಮ್ಲಾಮ್ಬೊ, ‘ತಪ್ಪಿತಸ್ಥರಿಗೆ ಶೀಘ್ರದಲ್ಲಿ ಶಿಕ್ಷೆಯಾಗಬೇಕಿದೆ’ ಎಂದಿದ್ದಾರೆ.
‘ಇಂಥ ಪ್ರಕರಣಗಳು ಸಮಾಜದಲ್ಲಿ ಮಾನವೀಯ ಮೌಲ್ಯಗಳು ಕಡೆಗಣನೆಗೆ ಒಳಗಾಗುವಂತೆ ಮಾಡುತ್ತವೆ. ಅಪರಾಧಿಗಳನ್ನು ಶಿಕ್ಷಿಸದೇ ಬಿಡುವುದು ಸರಿಯಲ್ಲ. ಭಾರತದ ಪ್ರಧಾನಿ ನರೇಂದ್ರ ಮೋದಿ, ಘಟನೆಗಳ ಬಗ್ಗೆ ಖಂಡನೆ ವ್ಯಕ್ತಪಡಿಸುವ ಜೊತೆ ಸೂಕ್ತ ಕ್ರಮ ತೆಗೆದುಕೊಳ್ಳಬೇಕಿದೆ’ ಎಂದು ಅವರು ಹೇಳಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.