ನವದೆಹಲಿ (ಐಎಎನ್ಎಸ್): ಇರಾಕ್ನಲ್ಲಿ ನಾಗರಿಕ ಕಲಹದ ಬಿಕ್ಕಟ್ಟಿನಿಂದ ಸಮಸ್ಯೆಗೆ ಸಿಲುಕಿರುವ ಭಾರತೀಯರನ್ನು ರಕ್ಷಿಸಲು ಅಲ್ಲಿಗೆ ಸೇನೆ ಕಳುಹಿಸಲಾಗುವುದು ಎಂಬ ವದಂತಿಯನ್ನು ರಕ್ಷಣಾ ಸಚಿವ ಅರುಣ್ ಜೇಟ್ಲಿ ಸ್ಪಷ್ಟವಾಗಿ ನಿರಾಕರಿಸಿದ್ದಾರೆ.
ಭಾರತೀಯರನ್ನು ರಕ್ಷಿಸಲು ಇರಾಕ್ಗೆ ಸೇನೆ ಕಳುಹಿಸಲಾಗುತ್ತದೆಯೇ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಇಂತಹ ಯಾವುದೇ ಯೋಜನೆ ಇಲ್ಲ, ಊಹಾಪೋಹಗಳಿಗೆ ಕಿವಿಗೊಡಬೇಡಿ ಎಂದರು.
ವಿದೇಶಾಂಗ ವ್ಯವಹಾರಗಳ ಸಚಿವಾಲಯ ಬಿಡುಗಡೆ ಮಾಡಿರುವ ಅಂಕಿ ಅಂಶದಂತೆ, ಇರಾಕ್ನಲ್ಲಿ 10 ಸಾವಿರಕ್ಕೂ ಹೆಚ್ಚು ಭಾರತೀಯರು ನೆಲೆಸಿದ್ದು, ಇವರಲ್ಲಿ 120 ಜನ ಬಿಕ್ಕಟ್ಟಿಗೆ ಸಿಲುಕಿದ್ದಾರೆ. 39 ಭಾರತೀಯರನ್ನು ಉಗ್ರರು ಅಪಹರಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.