ಇಸ್ಲಾಮಾಬಾದ್: ಉರಿ ಸೇನಾ ನೆಲೆ ಮೇಲೆ ನಡೆದ ದಾಳಿ ಪ್ರಕರಣದ ಕುರಿತು ಅಂತರರಾಷ್ಟ್ರೀಯ ಮಟ್ಟದಲ್ಲಿ ಸ್ವತಂತ್ರ ತನಿಖೆ ನಡೆಸಬೇಕೆಂದು ಪಾಕಿಸ್ತಾನ ಒತ್ತಾಯಿಸಿದೆ.
ಪಾಕಿಸ್ತಾನದ ಉಗ್ರರು ದಾಳಿಯಲ್ಲಿ ಭಾಗಿಯಾಗಿದ್ದಾರೆ ಎಂಬ ಭಾರತದ ಆರೋಪ ತಳ್ಳಿಹಾಕಿರುವ ಪಾಕಿಸ್ತಾನ ಇದು ಆಧಾರರಹಿತ ಆರೋಪ ಎಂದು ಹೇಳಿದೆ. ‘ಪ್ರತಿ ಸಾರಿಯೂ ಭಾರತ ಯಾವುದೇ ತನಿಖೆ ನಡೆಸದೆ ಪಾಕಿಸ್ತಾ ನದ ವಿರುದ್ಧ ಆರೋಪ ಮಾಡುತ್ತಿದೆ’ ಎಂದು ಪಾಕಿಸ್ತಾನದ ಪ್ರಧಾನಿ ವಿದೇ ಶಾಂಗ ವ್ಯವಹಾರಗಳ ಸಲಹೆಗಾರ ಸರ್ತಾಜ್ ಅಜೀಜ್ ಹೇಳಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.