ADVERTISEMENT

ಐಸಿಜೆ ನ್ಯಾಯಮೂರ್ತಿಯಾಗಿ ಭಾರತದ ದಲ್ವೀರ್ ಭಂಡಾರಿ ಪುನರಾಯ್ಕೆ

ಏಜೆನ್ಸೀಸ್
Published 21 ನವೆಂಬರ್ 2017, 4:48 IST
Last Updated 21 ನವೆಂಬರ್ 2017, 4:48 IST
ದಲ್ವೀರ್ ಭಂಡಾರಿ
ದಲ್ವೀರ್ ಭಂಡಾರಿ   

ನ್ಯೂಯಾರ್ಕ್:  ಹೇಗ್‍ನಲ್ಲಿರುವ ಅಂತರ ರಾಷ್ಟ್ರೀಯ ನ್ಯಾಯಾಲಯ(ಐಸಿಜೆ) ನ್ಯಾಯಾಧೀಶರಾಗಿ ಭಾರತದ ದಲ್ವೀರ್ ಭಂಡಾರಿ ಪುನರಾಯ್ಕೆಯಾಗಿದ್ದಾರೆ. ನ್ಯಾಯಾಧೀಶರಾಗಿ ದಲ್ವೀರ್ ಭಂಡಾರಿ ಆಯ್ಕೆಯಾಗಿರುವ ಸಂಗತಿಯನ್ನು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಟ್ವೀಟ್ ಮಾಡಿದ್ದಾರೆ.

ಐಸಿಜೆ ನ್ಯಾಯಮೂರ್ತಿ ಹುದ್ದೆಯ ಸ್ಪರ್ಧೆಯಲ್ಲಿದ್ದ  ಬ್ರಿಟನ್‌ನ ಕ್ರಿಸ್ಟೋಫರ್ ಗ್ರೀನ್‌ ವುಡ್ ಕೊನೆಯ ಕ್ಷಣದಲ್ಲಿ  ನಾಮಪತ್ರ ಹಿಂತೆಗೆದುಕೊಂಡ ಕಾರಣ ಭಂಡಾರಿಯವರಿಗೆ ಸುಲಭವಾಗಿ ಗೆಲುವು ದಕ್ಕಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT