ADVERTISEMENT

ಧ್ವಜ ಹರಿದ ಪ್ರಕರಣ ಕ್ರಮಕ್ಕೆ ಒತ್ತಾಯ

ಪಿಟಿಐ
Published 23 ಏಪ್ರಿಲ್ 2018, 19:36 IST
Last Updated 23 ಏಪ್ರಿಲ್ 2018, 19:36 IST

ಲಂಡನ್‌: ಪ್ರಧಾನಿ ನರೇಂದ್ರ ಮೋದಿ ಅವರು ಕಳೆದ ವಾರ ಭೇಟಿ ನೀಡಿದ್ದ ವೇಳೆ ಇಲ್ಲಿನ ಪಾರ್ಲಿಮೆಂಟ್ ಸ್ಕ್ವೇರ್‌ನಲ್ಲಿ ಭಾರತದ ಧ್ವಜ ಹರಿದು, ಬೆಂಕಿ ಹಚ್ಚಿದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಬ್ರಿಟಿನ್ ಸಂಸದ ಬಾಬ್ ಬ್ಲಾಕ್‌ಮನ್ ಮತ್ತು ಭಾರತೀಯ ಸಮುದಾಯ ಸರ್ಕಾರವನ್ನು ಆಗ್ರಹಿಸಿದೆ.

ಸಂಸತ್‌ನಲ್ಲಿ ಪ್ರಸ್ತಾಪಿಸಿರುವ ಕನ್ಸರ್ವೆಟಿವ್‌ ಪಕ್ಷದ ಬ್ಲಾಕ್‌ಮನ್, ಇದೊಂದು ನಾಚಿಕೆಗೇಡಿನ ಸಂಗತಿ. ಈ ಬಗ್ಗೆ ಗೃಹ ಕಾರ್ಯದರ್ಶಿಗೆ ಪತ್ರ ಬರೆದು ಪೊಲೀಸ್ ತನಿಖೆಗೆ ಒತ್ತಾಯಿಸಲಾಗುವುದು’ ಎಂದು ಅವರು ತಿಳಿಸಿದರು.

‘ದಿ ಹಿಂದೂ ಫೋರಂ ಆಫ್ ಬ್ರಿಟನ್‌’ ಕೂಡ  ಕ್ರಮಕ್ಕೆ ಆಗ್ರಹಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.