ADVERTISEMENT

ಭಾರತದ ಹೇಳಿಕೆ ತಳ್ಳಿ ಹಾಕಿದ ಪಾಕ್‌

ಪಿಟಿಐ
Published 28 ಡಿಸೆಂಬರ್ 2017, 19:30 IST
Last Updated 28 ಡಿಸೆಂಬರ್ 2017, 19:30 IST

ಇಸ್ಲಾಮಾಬಾದ್‌: ಭಾರತೀಯ ಸೇನೆ ಇತ್ತೀಚೆಗೆ ಗಡಿ ನಿಯಂತ್ರಣ ರೇಖೆ ದಾಟಿ ಕಾರ್ಯಾಚರಣೆ ನಡೆಸಿದ ವರದಿಗಳನ್ನು ಪಾಕಿಸ್ತಾನ ಸೇನೆ ತಳ್ಳಿ ಹಾಕಿದೆ.

ಕದನ ವಿರಾಮ ಉಲ್ಲಂಘಿಸಿ ಪಾಕಿಸ್ತಾನದ ಪಡೆಗಳು ನಡೆಸಿದ ಗುಂಡಿನ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ ಸೋಮವಾರ ರಾತ್ರಿ ಗಡಿ ನಿಯಂತ್ರಣ ರೇಖೆ ದಾಟಿ ಮುನ್ನುಗ್ಗಿ ಮೂವರು ಪಾಕಿಸ್ತಾನಿ ಯೋಧರನ್ನು ಹತ್ಯೆ ಮಾಡಿತ್ತು.

ಈ ಬಗ್ಗೆ ಪ್ರತಿಕ್ರಿಯಿಸಿರುವ ಸೇನೆಯ ವಕ್ತಾರ ಮೇಜರ್‌ ಜನರಲ್‌ ಅಸೀಫ್‌ ಘಪೂರ್‌, ‘ಭಾರತ ಸುಳ್ಳು ಹೇಳಿಕೆ ನೀಡುತ್ತಿದೆ. ಕಾಶ್ಮೀರ ವಿಷಯದ ಬಗೆಗಿನ ಗಮನವನ್ನು ಬೇರೆಡೆ ಸೆಳೆಯಲು ಈ ರೀತಿ ತಂತ್ರ ರೂಪಿಸಲಾಗುತ್ತಿದೆ. ಕಳೆದ ವರ್ಷ ನಡೆಸಿದ ನಿರ್ದಿಷ್ಟ ದಾಳಿಯೂ ಸಹ ಸುಳ್ಳು’ ಎಂದು ಟೀಕಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.