ADVERTISEMENT

‘ಮದ್ಯ: ಮೇಲ್ಮನವಿ ಸಲ್ಲಿಸಿ’

​ಪ್ರಜಾವಾಣಿ ವಾರ್ತೆ
Published 20 ಏಪ್ರಿಲ್ 2017, 19:48 IST
Last Updated 20 ಏಪ್ರಿಲ್ 2017, 19:48 IST
‘ಮದ್ಯ: ಮೇಲ್ಮನವಿ ಸಲ್ಲಿಸಿ’
‘ಮದ್ಯ: ಮೇಲ್ಮನವಿ ಸಲ್ಲಿಸಿ’   

ಬೆಂಗಳೂರು: ‘ರಾಜ್ಯ ಹಾಗೂ ರಾಷ್ಟ್ರೀಯ ಹೆದ್ದಾರಿ ಪಕ್ಕದ ಮದ್ಯದಂಗಡಿ ಸ್ಥಳಾಂತರ ಮಾಡುವಂತೆ ಸುಪ್ರೀಂ ಕೋರ್ಟ್‌ ಹೊರಡಿಸಿರುವ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರವೇ  ಮೇಲ್ಮನವಿ ಸಲ್ಲಿಸಿ ಸಮಸ್ಯೆ ಬಗೆಹರಿಸಬೇಕು’ ಎಂದು ಒತ್ತಾಯಿಸಿ ಮದ್ಯ ವ್ಯಾಪಾರಿಗಳು ಗುರುವಾರ ಪ್ರತಿಭಟನಾ ರ‍್ಯಾಲಿ ನಡೆಸಿದರು.

ಮದ್ಯ ವ್ಯಾಪಾರಿಗಳ ಒಕ್ಕೂಟದ ನೇತೃತ್ವದಲ್ಲಿ ನಗರದ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಿಂದ ಸ್ವಾತಂತ್ರ್ಯ ಉದ್ಯಾನದವರೆಗೆ ನಡೆದ ಮೆರವಣಿಗೆಯಲ್ಲಿ ‘ಅಬಕಾರಿ ಕಾಯ್ದೆ 5ನ್ನು ತಿದ್ದುಪಡಿ ಮಾಡಿ’ ಎಂಬ ಘೋಷಣಾ ಫಲಕ ಪ್ರದರ್ಶಿಸಲಾಯಿತು.

ಈ ವೇಳೆ ಒಕ್ಕೂಟದ ಖಜಾಂಚಿ ಟಿ.ವಿ.ಮೆಹರವಾಡೆ ಅವರು ಮಾತನಾಡಿ, ‘ಕೋರ್ಟ್‌ ಆದೇಶ ರದ್ದುಪಡಿಸುವಂತೆ ರಾಜ್ಯ ಸರ್ಕಾರವು ರಾಷ್ಟ್ರಪತಿಯವರಿಗೆ ಅರ್ಜಿ ಸಲ್ಲಿಸಬೇಕು’ ಎಂದು ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.