ಕೊಲಂಬೊ : ಧಾರಾಕಾರ ಮಳೆಯಿಂದಾಗಿ ಶ್ರೀಲಂಕಾದಲ್ಲಿ ಪ್ರವಾಹ ಮತ್ತು ಭೂಕುಸಿತ ಸಂಭವಿಸಿದ್ದು, 90 ಮಂದಿ ಮೃತಪಟ್ಟಿದ್ದಾರೆ. 110ಕ್ಕೂ ಹೆಚ್ಚು ಜನ ನಾಪತ್ತೆಯಾಗಿದ್ದಾರೆ.
ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದ ಪಶ್ಚಿಮ ಮತ್ತು ದಕ್ಷಿಣ ಪ್ರಾಂತ್ಯಗಳಲ್ಲಿ ಹೆಚ್ಚಿನ ಹಾನಿ ಸಂಭವಿಸಿದೆ. ಸಾವಿರಾರು ಕುಟುಂಬಗಳು ತೊಂದರೆಗೀಡಾಗಿವೆ.
ದೇಶದ ನೈರುತ್ಯ ಭಾಗದಲ್ಲಿ ಮಳೆ ಮತ್ತು ಗಾಳಿ ಪ್ರಭಾವ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ವಾಯುಪಡೆ ಮತ್ತು ನೌಕಾಪಡೆ ಪರಿಹಾರ ಕಾರ್ಯಾಚರಣೆಗೆ ಕೈಜೋಡಿಸಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.