ADVERTISEMENT

ಸಿಖ್‌ ವ್ಯಕ್ತಿಯ ಕತ್ತಿ ತಂದ ಆತಂಕ

ಪಿಟಿಐ
Published 26 ಜುಲೈ 2017, 19:30 IST
Last Updated 26 ಜುಲೈ 2017, 19:30 IST

ಮೆಲ್ಬರ್ನ್‌: ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಸಿಖ್‌ ಯುವಕ, ವ್ರತಾಚರಣೆ ಪ್ರಯುಕ್ತ ಧರಿಸಿದ್ದ ಸಣ್ಣ ಕತ್ತಿ ಸಹಪ್ರಯಾಣಿಕರಲ್ಲಿ ಆತಂಕ ಸೃಷ್ಟಿಗೆ ಕಾರಣವಾಯಿತು.

ಕತ್ತಿಯನ್ನು ನೋಡಿದ ಸಹಪ್ರಯಾಣಿಕನೊಬ್ಬ ಪೊಲೀಸರಿಗೆ ಕರೆ ಮಾಡಿದ. ಕೂಡಲೇ ಸ್ಥಳಕ್ಕೆ ಬಂದ ಪೊಲೀಸರು ಕತ್ತಿಯನ್ನು ತೆಗೆಸಿ ಯುವಕನನ್ನು ಬಸ್‌ನಿಂದ ಕೆಳಗೆ ಇಳಿಸಿದರು.

ಪೊಲೀಸರ ವಿಚಾರಣೆ ವೇಳೆ ಸಂಪೂರ್ಣ ಸಹಕಾರ ನೀಡಿದ 20 ವರ್ಷದ ಆ ಯುವಕನ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ‘ನ್ಯೂಜಿಲೆಂಡ್‌ ಹೆರಾಲ್ಡ್‌’ ವರದಿ ಮಾಡಿದೆ.

ADVERTISEMENT

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.