ADVERTISEMENT

ಅಧಿವೇಶನ ಅಗತ್ಯವೇ?

​ಪ್ರಜಾವಾಣಿ ವಾರ್ತೆ
Published 13 ನವೆಂಬರ್ 2017, 19:30 IST
Last Updated 13 ನವೆಂಬರ್ 2017, 19:30 IST

ಅತ್ಯಾಧುನಿಕ ತಂತ್ರಜ್ಞಾನದ ಫಲವಾಗಿ ಇಂದು ವಿಶ್ವವೇ ನಮ್ಮ ಅಂಗೈಯಲ್ಲಿ ಇರುವಾಗ, ಉತ್ತರ ಕರ್ನಾಟಕದ ಕುಂದುಕೊರತೆಗಳನ್ನು ಚರ್ಚಿಸುವುದಕ್ಕಾಗಿ ಅಲ್ಲಿಗೇ ಹೋಗಿ ಅಧಿವೇಶನ ನಡೆಸುವುದು ಅಗತ್ಯವೇ? ಇಂಥ ಅಧಿವೇಶನಕ್ಕಾಗಿ ಇಷ್ಟೊಂದು ಹಲವು ಕೋಟಿ ರೂಪಾಯಿಗಳನ್ನು ಖರ್ಚು ಮಾಡುವುದು ಹಾಸ್ಯಾಸ್ಪದ.

ಅದಕ್ಕೆ ಬದಲಾಗಿ ಆ ಹಣವನ್ನೂ ಆ ಭಾಗದ ಅಭಿವೃದ್ಧಿ ಯೋಜನೆಗಳಿಗೆ ಉಪಯೋಗಿಸಿದರೆ ಸಾರ್ಥಕವೆನಿಸುತ್ತದೆ. ಸುವರ್ಣಸೌಧ ಕಟ್ಟಡವನ್ನು ಕಾಲೇಜು ಅಥವಾ ಆಸ್ಪತ್ರೆಯನ್ನಾಗಿ ಪರಿವರ್ತಿಸಬಹುದು. ಮುಂಬರುವ ಸರ್ಕಾರವಾದರೂ ಈ ನಿಟ್ಟಿನಲ್ಲಿ ಯೋಚಿಸುವುದು ಉತ್ತಮ.

-ವಿ.ವಿಜಯೇಂದ್ರ ರಾವ್, ಬೆಂಗಳೂರು

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.