ADVERTISEMENT

ಅಪದ್ಧ ನುಡಿ ಯಾಕೆ?

ಹಲವಾಗಲ ಶಂಭು
Published 28 ಜುಲೈ 2015, 19:30 IST
Last Updated 28 ಜುಲೈ 2015, 19:30 IST

ಪಾತಕಿ ಯಾಕೂಬ್‌ ಮೆಮನ್‌ ಗಲ್ಲು ಶಿಕ್ಷೆ ವಿರೋಧಿಸಿ ಹಿಂದಿ ನಟ ಸಲ್ಮಾನ್‌ ಖಾನ್‌, ತಾವು ಮಾಡಿದ ಟ್ವೀಟ್‌ಗೆ ದೇಶದಾದ್ಯಂತ ತೀವ್ರ ವಿರೋಧ ವ್ಯಕ್ತವಾಗುತ್ತಿದ್ದಂತೆಯೇ ಎಚ್ಚೆತ್ತು ಕ್ಷಮೆ ಯಾಚಿಸಿದ್ದಾರೆ.

ಕೋರ್ಟ್‌ ಈ ಪ್ರಕರಣದ ಸತ್ಯಾಸತ್ಯತೆಯನ್ನು ಅರಿತೇ ಗಲ್ಲು ಶಿಕ್ಷೆ ಪ್ರಕಟಿಸಿರುವುದು. ಉಪ್ಪು ತಿಂದವರು ನೀರು ಕುಡಿಯಲೇ ಬೇಕು.
ಸಲ್ಮಾನ್  ಅಸಂಖ್ಯಾತ ಪ್ರೇಕ್ಷಕರನ್ನು ಹೊಂದಿರುವ ನಟ. ತಮ್ಮ ನಡೆ-ನುಡಿಗಳಿಂದ ಸಮಾಜಕ್ಕೆ ಒಳ್ಳೆಯ ಸಂದೇಶವನ್ನು ನೀಡಬೇಕೇ ಹೊರತು ಇಂಥ ಅಪದ್ಧ ನುಡಿಗಳನ್ನಾಡಿ ಸಮಾಜವನ್ನು ತಪ್ಪುದಾರಿಗೆ ಎಳೆಯಬಾರದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.